
ಕನಕಪುರ(ಫೆ.12): ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಲಕ್ಷ್ಮಿ'ಪುರದಲ್ಲಿ ನಡೆದಿದೆ.
ದಂಪತಿ ಪತಿ ಸೋಮಶೇಖರ್ (36), ಪತ್ನಿ ಸುಧಾ (27) ಹಾಗೂ ಮಗು ಪ್ರೀತಂ ಮೃತರು. ಮತ್ತೊಬ್ಬ ಪುತ್ರಿ ಮನೆಪಾಠ ಮುಗಿಸಿಕೊಂಡು ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸೋಮಶೇಖರ್ ಅವರು ಗೂಡಿನ ವ್ಯಾಪಾರ ಮಾಡಿಕೊಂಡಿದ್ದು, ರೈತರ ಬಳಿ ಸಾಲಕ್ಕೆ ಗೂಡು ಖರೀದಿಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದರು. ಗೂಡು ತೆಗೆದುಕೊಂಡಿದ್ದ ರೈತರಿಗೆ ಹಣ ನೀಡಿರಲಿಲ್ಲ. ಇಂದು ಬೆಳಿಗ್ಗೆ ಮನೆಯ ಬಳಿ ಹಣಕ್ಕಾಗಿ ರೈತರು ಬಂದು ಗಲಾಟೆ ಮಾಡಿದ್ದರು. ಸಂಜೆ ವೇಳೆಗೆ ಮೂವರು ಮೃತಪಟ್ಟಿದ್ದಾರೆ. ಕನಕಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.