
ಬೆಂಗಳೂರು(ಸೆ.13): ಇಂದು ಬಕ್ರೀದ್ ಹಬ್ಬ ಇರುವುದರಿಂದ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ಸಾಮಾನ್ಯ ರಜೆ. ಆದರೆ ಸೆಪ್ಟಂಬರ್ 14ರಂದು ಮಕ್ಕಳ ಹಿತದೃಷ್ಟಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಿದೆ. ಬೆಂಗಳೂರಿನಲ್ಲಂತೂ ನಿನ್ನೆ ಮಧ್ಯಾಹ್ನದಿಂದಲೇ ಶಾಲಾ - ಕಾಲೇಜು ಆಡಳಿತ ಮಂಡಳಿ ಮಕ್ಕಳಿಗೆ ರಜೆ ನೀಡಿದೆ.
ಮಂಡ್ಯ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದಿನಿಂದ ನಾಲ್ಕು ದಿನಗಳ ಕಾಲ ರಜೆ ಘೋಷಿಸಲಾಗಿದೆ. ಮಂಡ್ಯದಲ್ಲಿ ಕಳೆದ ಒಂದು ವಾರದಿಂದಲೂ ತರಗತಿಗಳು ನಡೆದೇ ಇಲ್ಲ.
ಇನ್ನೂ ಕೆಲವು ಜಿಲ್ಲೆಗಳಲ್ಲಿ ಪರಿಸ್ಥಿತಿ ಅವಲೋಕಿಸಿ ರಜೆ ನೀಡಲು ಆಯಾ ಜಿಲ್ಲಾ ಡಿಸಿಗಳಿಗೆ ಸೂಚನೆ ನೀಡಲಾಗಿದೆ. ಒಟ್ಟಿನಲ್ಲಿ ಕರುನಾಡ ಕಾವಲಿಗರಲ್ಲಿ ಶಾಂತ ರೀತಿಯಿಂದ ವರ್ತಿಸುವಂತೆ ವಿನಂತಿ ಮಾಡಿಕೊಳ್ಳುತ್ತೇವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.