
ಬೆಂಗಳೂರು(ಜ.24): ನಾಳೆ ಕರ್ನಾಟಕ ಬಂದ್ ಕೆಲವು ಜಿಲ್ಲೆಗಳಲ್ಲಿ ಮಾತ್ರ ಶಾಲಾ ಕಾಲೇಜುಗಳಲ್ಲಿ ರಜೆ ಘೋಷಿಸಿದ್ದು, ಕೆಲವನ್ನು ಜಿಲ್ಲಾಧಿಕಾರಿ ವಿವೇಚನೆಗೆ ನೀಡಲಾಗಿದ್ದರೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ರಜೆ ಘೋಷಿಸುವುದನ್ನು ಜಿಲ್ಲಾಡಳಿತದ ವಿವೇಚನೆಗೆ ಬಿಡಲಾಗಿದೆ.
ರಜೆ ನೀಡಿರುವ ಜಿಲ್ಲೆಗಳು
ಬೆಂಗಳೂರು ನಗರ, ಕೋಲಾರ, ಮಂಡ್ಯ, ರಾಮನಗರದಲ್ಲಿ ರಜೆ, ಧಾರವಾಡ ಜಿಲ್ಲೆಯ ಎಲ್ಲ ಸರಕಾರಿ,ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ, ಬೆಳಗಾವಿಯ ಕೆಲವು ತಾಲೂಕುಗಳಲ್ಲಿ ಮಾತ್ರ ರಜೆ ಘೋಷಿಸಲಾಗಿದೆ.
ರಜೆ ನೀಡಿರದ ಜಿಲ್ಲೆಗಳು
ಮೈಸೂರು, ಹಾಸನ, ಬಾಗಲಕೋಟ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಯಾದಗಿರಿ, ಬೀದರ್, ಕೊಪ್ಪಳ ಜಿಲ್ಲೆಗಳಲ್ಲಿ ರಜೆಯಿಲ್ಲ.
ಉಳಿದ ಜಿಲ್ಲೆಗಳಲ್ಲಿ ರಜೆ ಘೋಷಿಸುವುದಕ್ಕೆ ಜಿಲ್ಲಾಡಳಿತದ ವಿವೇಚನೆಗೆ ಬಿಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.