
ಹುನಗುಂದ (ಜ. 16): ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಕೃಷ್ಣಾ ಮತ್ತು ಮಲಪ್ರಭಾ ನದಿಗಳ ಸಂಗಮವಾದ ಕೂಡಲಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಬಂದ ಲಕ್ಷಾಂತರ ಮಂದಿಗೆ ಬರದ ಬಿಸಿ ಮುಟ್ಟಿತು. ಪರಿಣಾಮ ಸ್ನಾನ ಮಾಡಲು ನೀರು ಲಭಿಸದೆ ಭಕ್ತರು ಸಮಸ್ಯೆ ಎದುರಿಸಿದರು.
ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ, ತಮಿಳುನಾಡು, ಮಹಾರಾಷ್ಟ್ರ ಇತರ ರಾಜ್ಯಗಳಿಂದ ಪುಣ್ಯಸ್ನಾನಕ್ಕೆಂದು ಮಂಗಳವಾರ ಲಕ್ಷಾಂತರ ಭಕ್ತರು ಆಗಮಿಸಿದ್ದರು. ನದಿಯಲ್ಲಿ ನೀರು ಬರಿದಾಗಿದ್ದರಿಂದ ಕೂಡಲಸಂಗಮ ಅಭಿವೃದ್ಧಿ ಮಂಡಳಿ ನಿರ್ಮಿಸಿದ್ದ ತಾತ್ಕಾಲಿಕ ಸ್ನಾನಘಟ್ಟಗಳಲ್ಲಿ ಸರದಿಯಲ್ಲಿ ನಿಂತು ಸ್ನಾನ ಮಾಡಿದರು.
ಬಹುತೇಕರು ಸರದಿಯಲ್ಲಿ ನಿಲ್ಲುವ ಗೊಡವೆ ಬೇಡವೆಂದು ಬಸವಣ್ಣನವರ ಐಕ್ಯ ಮಂಟಪದ ಬಳಿ ಸೇರಿ ನದಿಯ ತಗ್ಗು ಪ್ರದೇಶದಲ್ಲಿ ನಿಂತ ರಾಡಿ ನೀರಿನಲ್ಲಿ ಸ್ನಾನ ಮಾಡಿದರೆ, ಕೆಲವರು ಸಂಗಮದ ಸುತ್ತ-ಮುತ್ತ ಇರುವ ತೋಟದ ಬಾವಿಯಲ್ಲಿ ಸ್ನಾನ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.