ವಿಭಜನೆಗೆ ನೆಹರೂ ದೂಷಿಸಿದ ಗೃಹ ಸಚಿವ ಅಮಿತ್ ಶಾ!

Published : Jun 28, 2019, 07:53 PM IST
ವಿಭಜನೆಗೆ ನೆಹರೂ ದೂಷಿಸಿದ ಗೃಹ ಸಚಿವ ಅಮಿತ್ ಶಾ!

ಸಾರಾಂಶ

‘ಧರ್ಮದ ಆಧಾರದ ಮೇಲೆ ದೇಶ ವಿಭಜನೆ ಐತಿಹಾಸಿಕ ತಪ್ಪು’| ಲೋಕಸಭೆಯಲ್ಲಿ ಗುಡುಗಿದ ಕೇಂದ್ರ ಗೃಹ ಸಚಿವ ಅಮಿತ್ ಶಾ| ದೇಶ ವಿಭಜನೆಗೆ ನೆಹರೂ ಕಾರಣ ಎಂದು ದೂಷಿಸಿದ ಅಮಿತ್ ಶಾ| ‘ಕಾಶ್ಮೀರದ ಇಂದಿನ ಬಿಕ್ಕಟ್ಟಿಗೆ ನೆಹರೂ ತಪ್ಪು ನೀತಿಗಳೇ ಕಾರಣ’| ಅಮಿತ್ ಶಾ ಆರೋಪಕ್ಕೆ ಕೆರಳಿದ ಕಾಂಗ್ರೆಸ್ ಸದಸ್ಯರು| ‘ಕಣಿವೆಯಲ್ಲಿ ಭಾರತ ವಿರೋಧಿ ಧೋರಣೆಯನ್ನು ಕೇಂದ್ರ ಸರ್ಕಾರ ಬದಲಿಸಲಿದೆ’|

ನವದೆಹಲಿ(ಜೂ.28): ಅವಿಭಜಿತ ಭಾರತವನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡುವ ಮೂಲಕ, ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ದೊಡ್ಡ ತಪ್ಪು ಮಾಡಿದರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.

ಲೋಕಸಭೆಯಲ್ಲಿ ಇಂದು ಮಾತನಾಡಿದ ಅಮಿತ್ ಶಾ, ಕಾಶ್ಮೀರದ ಇಂದಿನ ಬಿಕ್ಕಟ್ಟು ಮತ್ತು ಸಮಸ್ಯೆಗಳಿಗೆ ನೆಹರೂ ವರ ನೀತಿಗಳೇ ಕಾರಣ ಎಂದು ದೂರಿದರು.

ಧರ್ಮದ ಆಧಾರದ ಮೇಲೆ ದೇಶ ವಿಭಜನೆ ಮಾಡಿದ್ದು ಐತಿಹಾಸಿಕ ತಪ್ಪು ಎಂದ ಶಾ, ದೇಶದ ಮೊದಲ ಪ್ರಧಾನಿಯ ತಪ್ಪು ನೀತಿಗಳಿಂದಾಗಿ ದೇಶ ಇಂದಿಗೂ ಬೆಲೆ ತೆರುತ್ತಿದೆ ಎಂದು ಹರಿಹಾಯ್ದರು.

ಇನ್ನು ನೆಹರೂ ಹೆಸರು ಪ್ರಸ್ತಾಪವಾಗುತ್ತಿದ್ದಂತೇ ಕೆರಳಿದ ಕಾಂಗ್ರೆಸ್ ಸದಸ್ಯರು, ದೇಶ ಕಟ್ಟಿದ ಮಹಾನ್ ನಾಯಕನಿಗೆ ಗೃಹ ಸಚಿವರು ಅವಮಾನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದಕ್ಕೆ ತಿರುಗೇಟು ನೀಡಿದ ಅಮಿತ್ ಶಾ, ಇಂದು ಮೂರನೇ ಒಂದು ಭಾಗದಷ್ಟು ಜಮ್ಮು ಮತ್ತು ಕಾಶ್ಮೀರ ಭಾರತದ ಹತೋಟಿಯಲ್ಲಿ ಇಲ್ಲ. ಈ ಪರಿಸ್ಥಿತಿಗೆ ಯಾರು ಕಾರಣ ಎಂದು ಮರು ಪ್ರಶ್ನಿಸಿದರು.

ಕಾಶ್ಮೀರದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಕಣಿವೆಯಲ್ಲಿ ಭಾರತ ವಿರೋಧಿ ಧೋರಣೆಯನ್ನು ಕೇಂದ್ರ ಸರ್ಕಾರ ಬದಲಿಸಲು ಮುಂದಾಗಿದೆ ಎಂದು ಶಾ ನುಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ಯಾರಂಟಿ ಹೆಸರಿನಲ್ಲಿ ಕಾಲಹರಣ ಮಾಡುವ ಕೆಲಸ ಆಗುತ್ತಿದೆ: ಛಲವಾದಿ ನಾರಾಯಣಸ್ವಾಮಿ
ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ