
ತುಮಕೂರು (ಡಿ.15): ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ತುಮಕೂರಿನ ಹೆಗ್ಗೆರೆಯಲ್ಲಿರುವ ಮೆಡಿಕಲ್ ಕಾಲೇಜ್ನ ಆಸ್ಪತ್ರೆಗೆ ಗುಬ್ಬಿ ತಾಲೂಕಿನ ಹರದಗೆರೆ ಗ್ರಾಮದ ಪ್ರೇಮಾ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇವರ ಬಳಿ ಯಶಸ್ವಿನಿ ಕಾರ್ಡ್ ಇದ್ದರೂ ಕೂಡ 7 ಸಾವಿರ ರೂ. ಕಟ್ಟಿಸಿಕೊಂಡಿದ್ದಾರೆ. ಔಷಧಿಗಾಗಿ 8 ಸಾವಿರ ರೂ. ವಸೂಲಿ ಮಾಡಿದ್ದಾರೆ. ಖರ್ಚಾದ ಎಲ್ಲಾ ಹಣವನ್ನೂ ಯಶಸ್ವಿನಿಯಿಂದ ಭರಿಸಿಕೊಡಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಆದರೆ ಪ್ರೇಮಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ತಿಂಗಳು ಕಳೆದರೂ ಇನ್ನೂ ಹಣ ನೀಡಿಲ್ಲವೆಂದು ಮಹಿಳೆ ಆರೋಪಿಸಿದ್ದಾಳೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.