ಸುಪಾರಿ ಹಂತಕರಿಗೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಂದ ಶಸ್ತ್ರಾಸ್ತ್ರ ಪೂರೈಕೆ ಆಗುತ್ತೆ; ಗೃಹ ಸಚಿವರೇ ಹೀಗಂದ್ರೆ ಹೇಗೆ?

Published : Mar 05, 2018, 04:23 PM ISTUpdated : Apr 11, 2018, 12:46 PM IST
ಸುಪಾರಿ ಹಂತಕರಿಗೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಂದ ಶಸ್ತ್ರಾಸ್ತ್ರ ಪೂರೈಕೆ ಆಗುತ್ತೆ; ಗೃಹ ಸಚಿವರೇ ಹೀಗಂದ್ರೆ ಹೇಗೆ?

ಸಾರಾಂಶ

ಸುಪಾರಿ ಹಂತಕರಿಗೆ ಮಹಾರಾಷ್ಟ್ರ, ಉತ್ತರ ಪ್ರದೇಶದಿಂದ ಶಸ್ತ್ರಾಸ್ತ್ರ ಬರುತ್ತಿವೆ. ಗೌರಿ ಲಂಕೇಶ್ ಹತ್ಯೆ ಸೇರಿದಂತೆ ಇತರೆ ಕೇಸ್ ತನಿಖೆ ವೇಳೆ ಇದು ಗೊತ್ತಾಗಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. 

ಉಡುಪಿ (ಮಾ. 05): ಸುಪಾರಿ ಹಂತಕರಿಗೆ ಮಹಾರಾಷ್ಟ್ರ, ಉತ್ತರ ಪ್ರದೇಶದಿಂದ ಶಸ್ತ್ರಾಸ್ತ್ರ ಬರುತ್ತಿವೆ. ಗೌರಿ ಲಂಕೇಶ್ ಹತ್ಯೆ ಸೇರಿದಂತೆ ಇತರೆ ಕೇಸ್ ತನಿಖೆ ವೇಳೆ ಇದು ಗೊತ್ತಾಗಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. 

ಅಲ್ಲಿನ ಸರ್ಕಾರಗಳು ಅಕ್ರಮವಾಗಿ ಪಿಸ್ತೂಲ್ ಸೇರಿದಂತೆ ಶಸ್ತ್ರಾಸ್ತ್ರ ಮಾರಾಟ ಅಂಗಡಿ ಬಂದ್ ಮಾಡಬೇಕು.  ಕೊಲೆಗಾರರು, ಸುಫಾರಿ ಹಂತಕರು ಈ ಎರಡೂ ರಾಜ್ಯಗಳಿಂದ ತರುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕಿರುವುದು ಆ ರಾಜ್ಯಗಳ ಜವಾಬ್ದಾರಿ.  ರಾಜ್ಯಗಳಲ್ಲಿ ನಡೆದ ಕೆಲ ಹತ್ಯೆಗಳಿಗೆ ಇಲ್ಲಿಂದ ತಂದ ಶಸ್ತ್ರಾಸ್ತ್ರ ಬಳಕೆಯಾಗಿದೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. 

ಇದೇ ಸಂದರ್ಭದಲ್ಲಿ ಗೋ ಮಾಂಸ ರಫ್ತಿನ ಬಗ್ಗೆ ಪ್ರಸ್ತಾಪಿಸುತ್ತಾ,  ಕೇಂದ್ರ ಸರ್ಕಾರ ಮೊದಲು ಗೋಮಾಂಸ ರಫ್ತನ್ನು ನಿಷೇಧೀಸಲಿ. ಬಿಜೆಪಿಯವರು ಕೇವಲ ಗೋಹತ್ಯೆ ಬಗ್ಗೆ ಮಾತ್ರ ಮಾತನಾಡುತ್ತಾರೆ.  ಎಲ್ಲಾ ಪ್ರಾಣಿಗಳ ಹತ್ಯೆಯನ್ನ ಕೇಂದ್ರ ನಿಷೇಧ ಮಾಡಲಿ. ಇದಕ್ಕೆ ನಾವು  ಬೆಂಬಲ, ಸಹಕಾರ ನೀಡುತ್ತೇನೆ ಎಂದಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್
ಭಾರತದ ಬೀಡಿಗೆ ಫಿದಾ ಆದ ರಷ್ಯನ್ನರು, ಒಂದು ಪ್ಯಾಕೆಟ್‌ ಇಷ್ಟು ದುಬಾರಿನಾ?