ಗೃಹ ಸಚಿವರ ನೇತೃತ್ವದಲ್ಲಿ ಡಿಜಿ-ಐಜಿಗಳ ಮಹತ್ವದ ಸಭೆ

Published : Dec 14, 2017, 10:32 AM ISTUpdated : Apr 11, 2018, 01:12 PM IST
ಗೃಹ ಸಚಿವರ ನೇತೃತ್ವದಲ್ಲಿ  ಡಿಜಿ-ಐಜಿಗಳ ಮಹತ್ವದ ಸಭೆ

ಸಾರಾಂಶ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಡಿಜಿ-ಐಜಿಗಳ ಮಹತ್ವದ  ಸಭೆ ಶನಿವಾರ ಅಥವಾ ಸೋಮವಾರ ನಡೆಯುವ ಸಾಧ್ಯತೆಯಿದೆ.

ಬೆಂಗಳೂರು (ಡಿ.14): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಡಿಜಿ-ಐಜಿಗಳ ಮಹತ್ವದ  ಸಭೆ ಶನಿವಾರ ಅಥವಾ ಸೋಮವಾರ ನಡೆಯುವ ಸಾಧ್ಯತೆಯಿದೆ.

ಬಿಜೆಪಿ ತಂತ್ರಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿತಂತ್ರ ರೂಪಿಸಲಿದೆ. ಗೃಹ ಸಚಿವ ರಾಮಲಿಂಗಾರೆಡ್ಡಿ  6 ವಿಭಾಗದ ಡಿಜಿ, ಐಜಿಗಳ ಸಭೆ ಕರೆದಿದ್ದಾರೆ.

ಕೋಮುಗಲಭೆಗೆ ಬಿಜೆಪಿ ನೀಡುತ್ತಿರುವ ಕುಮ್ಮಕ್ಕನ್ನು ವಿಫಲಗೊಳಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ. ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಇನ್ನೂ  ಅನೇಕ ಜಿಲ್ಲೆಗಳಲ್ಲಿ  ಬಿಜೆಪಿ ಗಲಭೆಗಳು ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ  ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವ ಕುರಿತಂತೆ ಡಿಜಿ-ಐಜಿಗಳ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

ಸಭೆ ಬಗ್ಗೆ ಐಜಿಗಳ ಜೊತೆ ದೂರವಾಣಿ ಮೂಲಕ  ಗೃಹ ಸಚಿವರು ರಾಮಲಿಂಗಾ ರೆಡ್ಡಿ ಮಾತನಾಡಿದ್ದು ಇದೇ ಶನಿವಾರ ಅಥವಾ ಸೋಮವಾರ ಡಿಜಿ-ಐಜಿಗಳ ಸಭೆ ನಡೆಯುವ ಸಾಧ್ಯತೆಯಿದೆ.  

ಸರ್ಕಾರ ಮತ್ತು ಇಲಾಖೆಗೆ ಕೆಟ್ಟ ಹೆಸರು ತರುವ ಕೆಲಸ ನಡೆಯುತ್ತಿದೆ.  ಇದಕ್ಕೆಲ್ಲ ಆಸ್ಪದ ನೀಡಬೇಡಿ. ಗೊಂದಲ ಸೃಷ್ಟಿಯಾಗದಂತೆ ಕ್ರಮ ಕೈಗೊಳ್ಳಿ. ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳುವಂತೆ ಐಜಿಗಳಿಗೆ ಸೂಚನೆ ನೀಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕದ ನೆಲದಲ್ಲಿ ಕೋಟಿ ಕೋಟಿ ಸಂಪತ್ತು? ಯಾವ ಜಿಲ್ಲೆಗಳಲ್ಲಿದೆ ಚಿನ್ನ, ವಜ್ರದ ನಿಕ್ಷೇಪ?
'ನೀವು ಎಂಎಲ್ಸಿ ಅನ್ನೋಕೆ ಸಾಕ್ಷಿ ಏನು?' Keshav Prasad ಕಾರು ತಡೆದ ಟೋಲ್ ಸಿಬ್ಬಂದಿ, ಒಂದು ಗಂಟೆ ಕಾಲ ಕಿರಿಕ್!