
ಬೆಂಗಳೂರು(ಡಿ.04): ಸಂಸದ ಪ್ರತಾಪ್ ಸಿಂಹ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ತಂದೆ ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಅವರ ಬಗ್ಗೆ ಗೂಂಡಾ ಹೇಳಿಕೆ ವಿವಾದದ ಸ್ಪರೂಪ ಪಡೆದುಕೊಂಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ರಾಮಲಿಂಗಾ ರೆಡ್ಡಿ, ಗುಂಡೂರಾವ್'ಗೆ ಗೂಂಡಾ ಅಂದ್ರೆ ಬಿಜೆಪಿ ಅಧ್ಯಕ್ಷ ಜೈಲಿಗೆ ಹೋಗಿರಲಿಲ್ವಾ? ಬಿಜೆಪಿಯವರ ಬಗ್ಗೆ ಹೇಳ್ತಾ ಹೋದರೆ ಯಾರು ಎಷ್ಟು ಗೂಂಡಾ ಅನ್ನೋದು ಗೊತ್ತಾಗುತ್ತೆ. ಈ ಬಗ್ಗೆ ಮತ್ತೊಮ್ಮೆ ಮಾತನಾಡುತ್ತೇನೆ' ಎಂದು ಸಂಸದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ್ದಾರೆ.
ಸಭ್ಯತೆ ಇಲ್ಲದವರ ಹೇಳಿಕೆಗೆ ಏನಂತ ಪ್ರತಿಕ್ರಿಯೆ ಕೊಡೋದು
ಪ್ರತಾಪ್ ಸಿಂಹರವರ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ' ತಮ್ಮ ಕುಟುಂಬದ ಮೇಲೆ ಹೆಚ್ಚು ಮಾತಾಡ್ತಿದ್ದಾರೆ. ಶೋಭಾ ಕರಂದ್ಲಾಜೆ ನನ್ನ ಹೆಂಡತಿ ಬಗ್ಗೆ ಮಾತಾಡಿದ್ದರು. ಇದೀಗ ಪ್ರತಾಪ್ ಸಿಂಹ ನಮ್ಮ ಕುಟುಂಬದ ಬಗ್ಗೆ ಮಾತಾಡ್ತಿದ್ದಾರೆ. ಸಭ್ಯತೆ ಇಲ್ಲದವರ ಹೇಳಿಕೆಗೆ ಏನಂತ ಪ್ರತಿಕ್ರಿಯೆ ಕೊಡೋದು' ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.