
ನವದೆಹಲಿ: ಮರಣ ಹೊಂದಿದ ವ್ಯಕ್ತಿಯ ಗುರುತು ಹಿಡಿಯಲು ಆಧಾರ್ ಕಡ್ಡಾಯಗೊಳಿಸುವ ಕುರಿತು ಕೇಂದ್ರ ಗೃಹ ಇಲಾಖೆ ಸ್ಪಷ್ಟೀಕರಣ ನೀಡಿದೆ.
ಮರಣ ಪ್ರಮಾಣ ಪತ್ರ ಪಡೆಯಲು ಆಧಾರ್ ಕಡ್ಡಾಯವಲ್ಲ ಆದರೆ ಅರ್ಜಿದಾರರು ಮೃತ ವ್ಯಕ್ತಿಯ ಬಳಿ ಆಧಾರ್ ಇಲ್ಲವೆಂದು ಪ್ರಮಾಣಪತ್ರ ನೀಡಬೇಕು ಎಂದು ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ (RGI) ಕಚೇರಿಯು ತಿಳಿಸಿದೆ.
ಮೃತರ ಸಂಬಂಧಿಕರು/ಅರ್ಜಿದಾರರು ಆಧಾರ್ ಈ ಬಗ್ಗೆ ತಪ್ಪು ಮಾಹಿತಿ ನೀಡಿದಲ್ಲಿ ಆಧಾರ್ ಕಾನೂನು ಹಾಗೂ ಜನನ ಮತ್ತು ಮರಣ ನೋಂದಣಿ ಕಾಯ್ದೆ-1969ರ ನ್ವಯ ಶಿಕ್ಷಾರ್ಹ ಅಪರಾಧವಾಗುತ್ತದೆ, ಎಂದು ಆರ್’ಜಿಐ ಹೇಳಿದೆ.
ಇಂತಹ ಸಂದರ್ಭದಲ್ಲಿ ಅರ್ಜಿದಾರರ ಪತಿ/ಪತ್ನಿ ಅಥವಾ ಹೆತ್ತವರ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು ಎಂದು ಹೇಳಲಾಗಿದೆ.
ಆರ್’ಜಿಐ ಹಒರಡಿಸಿರುವ ಹೊಸ ನಿಯಮದ ಪ್ರಕಾರ ವ್ಯಕ್ತಿಯ ಮರಣ ಪ್ರಮಾಣ ಪತ್ರ ಪಡೆಯಬೇಕಾದರೆ, ಮೃತ ವ್ಯಕ್ತಿಯನ್ನು ಗುರುತಿಸಲು ಅಕ್ಟೋಬರ್ 1ರಿಂದ ಆತನ/ಆಕೆಯ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು ಎಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.