ಕೊಡಗಿಗೆ ಹೋಗೋ ಪ್ಲ್ಯಾನ್ ಇದ್ದರೆ ಓದಿ ಈ ಸುದ್ದಿ

Published : Jun 01, 2019, 02:27 PM IST
ಕೊಡಗಿಗೆ ಹೋಗೋ ಪ್ಲ್ಯಾನ್ ಇದ್ದರೆ ಓದಿ ಈ ಸುದ್ದಿ

ಸಾರಾಂಶ

ನಿಮಗೆ ಕೊಡಗಿನತ್ತ ಹೋಗುವ ಪ್ಲಾನ್ ಇದ್ಯಾ..? ಹಾಗಾದ್ರೆ ನೀವು ಈ ಸುದ್ದಿಯನ್ನೊಮ್ಮೆ ಗಮನಿಸಲೇಬೇಕು. 

ಕೊಡಗು : ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷ ಭಾರಿ ಮಳೆ ಸುರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬಾರಿ ಮಳೆಗಾಲ ಆರಂಭಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ. 

ಕೊಡಗು ಜಿಲ್ಲೆಗೆ ನಿರಂತರವಾಗಿ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ ಹೋಂ ಸ್ಟೇ ಬುಕಿಂಗ್ ಸ್ಥಗಿತಕ್ಕೆ ಸೂಚನೆ ನೀಡಲಾಗಿದೆ. 

ಕಳೆದ ಬಾರಿ ಭಾರಿ ಮಳೆಯಿಂದ ತೀವ್ರ ಹಾನಿ ಎದುರಿಸಿದ್ದ ಮಡಿಕೇರಿ ತಾಲೂಕಿನ ಮಕ್ಕಂದೂರಿನಲ್ಲಿ ಈ ಬಾರಿ ಮುಂಚಿತವಾಗಿ ಹೋಂ ಸ್ಟೇ ಗಳನ್ನು ಬಂದ್ ಮಾಡುವಂತೆ ಇಲ್ಲಿನ ಪಿಡಿಒ ಆದೇಶಿಸಿದ್ದಾರೆ. 

ಕೊಡಗಿನ ಬಗ್ಗೆ ಎಚ್ಚರ ವಹಿಸಲು ಸಿಎಂ ಸೂಚನೆ

ಈ ಬಾರಿ ಮಳೆಗಾಲದಲ್ಲಿ ಸಮಸ್ಯೆ ಎದುರಾಗಬಾರದೆಂದು ಸೂಚನೆ ನೀಡಿದ್ದು, ಆದೇಶ ಮೀರಿ ಬುಕಿಂಗ್ ಮಾಡಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಪಿಡಿಒ ತಿಳಿಸಿದ್ದಾರೆ. 

ಮಳೆಗಾಲದಲ್ಲಿ ಯಾವುದೇ ರೀತಿ ಅನಾಹುತ ಸಂಭವಿಸಿದಲ್ಲಿ  ಹೋಮ್ಸ್ ಸ್ಟೇ ಮಾಲಿಕರೇ ಹೊಣೆಯಾಗಿರುತ್ತಾರೆ. ಈ ವರ್ಷವೂ ಕೂಡ  ರಸ್ತೆ ಕುಸಿತವಾಗುವ ಸಂಭವ ಇದ್ದು, ಹಾಗೆಂದು ಭೂ ವಿಜ್ಞಾನ ಇಲಾಖೆ ಮಾಹಿತಿ ನೀಡಿದೆ. ಈ ನಿಟ್ಟಿನಲ್ಲಿ ಹೋಂ ಸ್ಟೇ ಬುಕಿಂಗ್ ಮಾಡದಂತೆ ಸೂಚಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!