
ಮೃತರ ಅಂತ್ಯ ಸಂಸ್ಕಾರ ನಡೆಸುವಾಗ ಬಂಧುಗಳು ಸಾಮಾನ್ಯವಾಗಿ ದುಃಖದಲ್ಲಿರುತ್ತಾರೆ. ಇಲ್ಲೊಂದು ಘಟನೆಯಲ್ಲಿ ಅಂತಹ ದುಃಖವನ್ನು ಇನ್ನಷ್ಟು ಇಮ್ಮಡಿಗೊಳಿಸುವ ಘಟನೆಗೆ ಜೇನು ನೊಣಗಳು ಕಾರಣ ವಾಗಿವೆ. ಮದುರೈನ ತಿರುಮಂಗಳಂ ವ್ಯಾಪ್ತಿಯಲ್ಲಿ 80ರ ಹರೆಯದ ಮಹಿಳೆಯೊಬ್ಬರು ಸಾವಿಗೀಡಾಗಿದ್ದರು.
ಅವರ ಅಂತ್ಯ ಸಂಸ್ಕಾರಕ್ಕೆಂದು ಮೃತದೇಹವನ್ನು ಸ್ಮಶಾನಕ್ಕೆ ಕೊಂಡೊಯ್ಯಲಾಗಿದ್ದ ಸಂದರ್ಭ ಏಕಾಏಕಿ ಜೇನುನೊಣಗಳ ದಾಳಿ ನಡೆದಿದೆ. ಮೃತದೇಹ ಹೊತ್ತುಕೊಂಡು ಬಂದಿದ್ದವರು, ಮೃತದೇಹವನ್ನು ಅಲ್ಲೇ ಬಿಟ್ಟು ಜೇನುನೊಣಗಳ ದಾಳಿಯಿಂದ ತಪ್ಪಿಸಿ ಕೊಳ್ಳಲು ಕೊಂಚ ಕಾಲ ಬಚ್ಚಿಟ್ಟುಕೊಳ್ಳಬೇಕಾದ ಅನಿವಾರ್ಯತೆಯುಂಟಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.