ರಾಮ ಮಂದಿರ ನಿರ್ಮಾಣಕ್ಕೆ ಸುನ್ನಿ ಸಮುದಾಯದ ಬೆಂಬಲ ಕೋರಿದ ಕೇಂದ್ರ ಸಚಿವ

Published : Feb 04, 2018, 05:47 PM ISTUpdated : Apr 11, 2018, 12:34 PM IST
ರಾಮ ಮಂದಿರ ನಿರ್ಮಾಣಕ್ಕೆ ಸುನ್ನಿ ಸಮುದಾಯದ ಬೆಂಬಲ ಕೋರಿದ ಕೇಂದ್ರ ಸಚಿವ

ಸಾರಾಂಶ

ರಾಮ ಮಂದಿರ ನಿರ್ಮಾಣಕ್ಕೆ ಸುನ್ನಿ ಸಮುದಾಯದ ಬೆಂಬಲ ಕೋರಿದ ಕೇಂದ್ರ ಸಚಿವ

ಥಾಣೆ(ಫೆ.04): ಸುನ್ನಿ ಮುಸ್ಲಿಂ ಸಮುದಾಯ ಬೆಂಬಲ ನೀಡುವ ಪ್ರಸ್ತಾಪದ ನಂತರ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಶಿಯಾ ಸಮುದಾಯದ ಬೆಂಬಲವನ್ನು ನಿರೀಕ್ಷಿಸಿದ್ದಾರೆ.

ಮಹಾರಾಷ್ಟ್ರದ ಥಾಣೆಯಲ್ಲಿ 25ನೇ ರಾಷ್ಟ್ರೀಯ ಕವಿ ಸಮ್ಮೇಳನ ಉದ್ಘಾಟಿಸಿದ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ಈಗಾಗಲೇ ಶಿಯಾ ಸಮುದಾಯದವರು ಬೆಂಬಲ ನೀಡಿದ್ದಾರೆ. ಈ ಕಾರ್ಯಕ್ಕೆ ಸುನ್ನಿ ಸಮುದಾಯ ಕೂಡ ಬೆಂಬಲ ನೀಡುವ ಭರವಸೆಯಿದೆ ಎಂದು ತಿಳಿಸಿದರು.

ಕಳೆದ ವರ್ಷ ನವಂಬರ್'ನಲ್ಲಿ ಉತ್ತರ ಪ್ರದೇಶದ ಶಿಯಾ ವಕ್ಫ್ ಕೇಂದ್ರ ಮಂಡಳಿ ವಿವಾದಿದ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಸ್ಥಳದಲ್ಲಿ ಮಂದಿರ ನಿರ್ಮಾಣಕ್ಕೆ ಬೆಂಬಲ ನೀಡಿ ಪರಿಹಾರ ಕಂಡಿಕೊಳ್ಳಲು ಸುಪ್ರೀಂ ಕೋರ್ಟ್'ಗೆ ಪ್ರಸ್ತಾವನೆ ಸಲ್ಲಿಸಿತ್ತು. ಕಳೆದ ವರ್ಷ ನಡೆದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯಗಳಿಸಿತ್ತು. ತದ ನಂತರ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲಿಯೋನಲ್ ಮೆಸ್ಸಿಗೆ RM 003-V2 ವಾಚ್ ಉಡುಗೊರೆ, ಇದ್ರ ಬೆಲೆಗೆ 2 ರೋಲ್ಸ್ ರಾಯ್ಸ್ ಕಾರು ಬರುತ್ತೆ
ಮಾದಪ್ಪ ಮೆಸ್‌ನಲ್ಲಿ ಮುದ್ದೆ ಬಡಿಸೋದು ಅಶುಚಿ; ಟೀಕಿಸಿದವರ ಬೌದ್ಧಿಕ ಬಡತನ ಬಯಲಿಗೆಳೆದ ಕಾರ್ತಿಕ್ ರೆಡ್ಡಿ!