
ಚಿಕ್ಕಮಗಳೂರು : ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ಹೋಗೋ ಪ್ರವಾಸಿಗರೇ ಎಚ್ಚರ. ಇಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಮೂಡಿಗೆರೆಯ ಹೆಬ್ಬಾಳೆ ಸೇತುವೆ ಸಂಪೂರ್ಣ ಶಿಥಿಲಾವಸ್ಥೆ ತಲುಪಿದೆ.
ಭದ್ರಾ ನದಿಯ ರಭಸಕ್ಕೆ ಸೇತುವೆ ಮೇಲಿನ ಸಿಮೆಂಟ್ ಕಿತ್ತು ಹೋಗಿದ್ದು, ಸಿಮೆಂಟ್ ಕಿತ್ತು ಸೇತುವೆಯ ಕಬ್ಬಿಣದ ಸರಳುಗಳು ಕಾಣುತ್ತಿವೆ. ಸೇತುವೆಯ ಮಧ್ಯದಲ್ಲಿ ರಂಧ್ರಗಳಾಗಿವೆ. ಅಲ್ಲದೇ ಸೇತುವೆ ಅಲ್ಲಲ್ಲೇ ಬಿರುಕು ಬಿಟ್ಟಿದ್ದು, ತಡೆಗೋಡೆಯೂ ಕೂಡ ಇಲ್ಲದಂತಾಗಿದೆ.
ಈ ನಿಟ್ಟಿನಲ್ಲಿ ಇಲ್ಲಿಗೆ ತೆರಳುವ ಪ್ರವಾಸಿಗರು ಹಾಗೂ ಭಕ್ತರು ಎಚ್ಚರಿಕೆಯಿಂದ ಸಂಚರಿಸುವುದು ಒಳಿತು. ಆದಷ್ಟು ಸೂಕ್ತ ಮುನ್ನೆಚ್ಚರಿಕೆಗಳೊಂದಿಗೆ ಇಲ್ಲಿಗೆ ತೆರಳುವುದು ಒಳಿತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.