
ಹೈದರಾಬಾದ್(ಜ.23): ರಸ್ತೆ ನಿಯಮಗಳನ್ನು ಮೀರಿದರೆ ಏನೆಲ್ಲಾ ಆನಾಹುತ ಆಗುತ್ತದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ರಸ್ತೆ ದಾಟುವ ವೇಳೆ ವೇಗವಾಗಿ ಬಂದ ಆಟೋ ರಿಕ್ಷಾ ಕೂಲಿ ಕಾರ್ಮಿಕನ ಮೇಲೆ ಎರಗಿದ ಪರಿಣಾಮಾವಾಗಿ ಮೃತ ಪಟ್ಟ ಘಟನೆ ಹೈದರಾಬಾದ್ ನಗರದ ಪಾತ ಬಸ್ತಿ ರೈಲ್ವೆ ನಿಲ್ದಾಣ ಸಮೀಪದ ಶಂಷಿರಗಂ ಸರ್ಕಲ್ ನಲ್ಲಿ ನಡೆದಿದೆ.
ಮೃತ ಕೂಲಿ ಕಾರ್ಮಿಕ ವೆಂಕಟಾಪುರದ 50 ವರ್ಷದ ಜಂಗಯ್ಯ ಎಂದು ತಿಳಿದು ಬಂದಿದೆ. ಅಲ್ಲದೆ ಆಟೋ ರಿಕ್ಷಾ ಡಿಕ್ಕಿ ರಭಸಕ್ಕೆ ಆಟೋ ಚಕ್ರವೇ ಉದರಿ ಹೋಗಿದೆ. ಈ ಭಯಾನಕ ದೃಶ್ಯವನ್ನು ಕಂಡ ಸ್ಥಳೀಯರು ಕಕ್ಕಾಬಿಕ್ಕಿಯಾಗಿದ್ದು, ಆಟೋ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.