
ದೇಶದೆಲ್ಲೆಡೆ ಹಣಕ್ಕಾಗಿ ಹಾಹಾಕಾರ ಶುರುವಾಗಿದೆ. ಆಸ್ಪತ್ರೆ, ಮೆಡಿಕಲ್ ಶಾಪ್ಗಳಲ್ಲಿ 500, 1000 ಹಳೆ ನೋಟು ಪಡೆಯುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಆದ್ರೆ ಕಿದ್ವಾಯಿ ಆಸ್ಪತ್ರೆಯಲ್ಲಿ 500, 1000 ಹಳೆ ನೋಟುಗಳನ್ನು ಪಡೆಯೋದಿಲ್ಲ ಎಂದು ಸ್ಪಷ್ಟವಾಗಿ ಬೋರ್ಡ್ ಹಾಕಲಾಗಿದೆ. ಹೀಗಾಗಿ ರೋಗಿಗಳು ಪರದಾಡ್ತಿದಾರೆ. ಕಳೆದೆರಡು ದಿನಗಳಿಂದ ಮೆಡಿಕಲ್ಲ್ಲಿ ಚಿಲ್ಲರೆ ನೀಡದೆ ರೋಗಿಗಳು, ರೋಗಿ ಸಂಬಂಧಿಕರು ಸಂಕಷ್ಟಕ್ಕೀಡಾಗಿದ್ದಾರೆ. ಚಿಲ್ಲರೆ ಬೇಕಾದ್ರೆ ವೈದ್ಯರ ಸಹಿ ಪಡೆದು ಮೆಡಿಸಿನ್ ಸ್ಲಿಪ್ ತರುವಂತೆ ಮೆಡಿಕಲ್ ಸಿಬ್ಬಂದಿ ತಿಳಿಸಿದ್ದಾರೆ. ಆದ್ರೆ ಇತ್ತ ಆಸ್ಪತ್ರೆಯಲ್ಲಿ ವೈದ್ಯರುಗಳು ಎರಡನೆ ಶನಿವಾರವೆಂದು ವೈದ್ಯರುಗಳು ಡ್ಯೂಟಿಗೆ ಬಂದಿಲ್ಲ. ಹೀಗಾಗಿ ರೋಗಿಗಳಿಗೆ ದಿಕ್ಕು ತೋಚದಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.