ಬಯಲಾಯ್ತು ವ್ಹೀಲ್ ಚೇರ್ ರಹಸ್ಯ: ಸಿಸಿಟಿವಿಯಲ್ಲಿ ಸಿಕ್ಕಿತು ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಸಾಕ್ಷಿ

Published : Oct 28, 2017, 08:32 AM ISTUpdated : Apr 11, 2018, 12:56 PM IST
ಬಯಲಾಯ್ತು ವ್ಹೀಲ್ ಚೇರ್ ರಹಸ್ಯ: ಸಿಸಿಟಿವಿಯಲ್ಲಿ ಸಿಕ್ಕಿತು ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಸಾಕ್ಷಿ

ಸಾರಾಂಶ

ಕಳೆದ ಸೋಮವಾರ ಬೀದರ್ ಬಿಮ್ಸ್​'ನಲ್ಲಿ ರೋಗಿಗೆ ವ್ಹೀಲ್ ಚೇರ್ ನೀಡದೇ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದರ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿತ್ತು. ನಮ್ಮ ವರದಿ ಇಂಪ್ಯಾಕ್ಟ್ ಆಗಿದೆ. ಸಿಸಿಟಿವಿ ಪರಿಶೀಲಿಸಿದಾಗ ಸಿಬ್ಬಂದಿ ನಿರ್ಲಕ್ಷ್ಯ ಸಾಬೀತಾಗಿದ್ದು  ತನಿಖೆಗೆ ಆದೇಶಿಸಲಾಗಿದೆ.

ಬೀದರ್(ಅ.28): ಕಳೆದ ಸೋಮವಾರ ಬೀದರ್ ಬಿಮ್ಸ್​'ನಲ್ಲಿ ರೋಗಿಗೆ ವ್ಹೀಲ್ ಚೇರ್ ನೀಡದೇ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದರ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿತ್ತು. ನಮ್ಮ ವರದಿ ಇಂಪ್ಯಾಕ್ಟ್ ಆಗಿದೆ. ಸಿಸಿಟಿವಿ ಪರಿಶೀಲಿಸಿದಾಗ ಸಿಬ್ಬಂದಿ ನಿರ್ಲಕ್ಷ್ಯ ಸಾಬೀತಾಗಿದ್ದು  ತನಿಖೆಗೆ ಆದೇಶಿಸಲಾಗಿದೆ.

ಭಾಲ್ಕಿ ತಾಲೂಕಿನ ಉಚ್ಚಾ ಗ್ರಾಮದ ಕೈಲಾಶ್​ ತನ್ನ ತಾತ ಸಂಗಪ್ಪ ಎಂಬ ವೃದ್ಧನನ್ನು ಆಸ್ಪತ್ರೆಗೆ ಕರೆತಂದಿದ್ರು. ಕಣ್ಣು ಕಾಣದ, ನಡೆಯಲು ಆಗದ ವೃದ್ಧನ ಕರೆದೊಯ್ಯಲು ವ್ಹೀಲ್ ಚೇರ್ ಕೇಳಿದ್ದರೆ ಸಿಬ್ಬಂದಿ ಕೊಟ್ಟಿರಲಿಲ್ಲ. ಆಗ ಬೇರೆ ವಿಧಿಯಿಲ್ಲದೇ ಕೈಲಾಶ್ ತಾತನನ್ನು ಎತ್ತಿಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದರು. ಈ ಬಗ್ಗೆ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡುತ್ತಲೇ ಬೀದರ್​ ಜಿಲ್ಲಾಡಳಿತ ತನಿಖೆಗೆ ಆದೇಶ ಮಾಡಿತ್ತು.

ಪ್ರಕರಣದ ತನಿಖೆ ಮಾಡಿದ ತನಿಖಾಧಿಕಾರಿಗಳು ಸಿಸಿಟಿವಿಯಿಂದ ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯ ಕಂಡು ಬಂದಿದೆ. ಕೂಡಲೇ ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳುವಂತೆ ಡಿಸಿ ಸೂಚನೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇದೇ ಮೊದಲ ಬಾರಿಗೆ ಅತೀ ದುಬಾರಿಯಾದ ಬೆಳ್ಳಿ, ಚಿನ್ನಕ್ಕಿಂತ ವೇಗದಲ್ಲಿ ಸಾಗುತ್ತಿದೆ ಸಿಲ್ವರ್
ರಾಜ್ಯದ ತಾಪಮಾನ 12°Cಗೆ ಕುಸಿತ-ಕರುನಾಡಿಗೆ ಶೀತ ಕಂಟಕ ಖಚಿತ-ಬೆಂಗಳೂರು ಜನತೆಗೆ ಮೈನಡುಕ ಉಚಿತ!