
ಬಂಟ್ವಾಳ: ವಾಹನದ ಟಯರ್ ಪಂಕ್ಚರ್ ಆದಾಗ ಅದನ್ನು ಬದಲಾಯಿಸಲು ಜಾಕ್ ಬಳಸುವುದನ್ನು ನೋಡಿದ್ದೇವೆ. ಆದರೆ ಅದೇ ಜಾಕ್ ತಂತ್ರಜ್ಞಾನವನ್ನು ಬಳಸಿ ಮನೆಯನ್ನು ಮೇಲಕ್ಕೆತ್ತುವ ಮೂಲಕ ನೆರೆಯಿಂದಲೂ ತಪ್ಪಿಸಿಕೊಳ್ಳಬಹುದು.
ಬಿಹಾರ, ಕೇರಳ ದೆಹಲಿ ಮುಂತಾದ ಕಡೆ ಈಗಾಗಲೇ ಚಿರಪರಿಚಿತವಾಗಿರುವ ಈ ತರದ ಕಾಮಗಾರಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಸಜಿಪನಡು ಗ್ರಾಮದಲ್ಲಿ ಮಾಡಲಾಗಿದೆ.
ಇಲ್ಲಿನ ಬೈಲಗುತ್ತು ನಿವಾಸಿ ರಿಯಾಝ್ ಎಂಬವರ ಮನೆ ಇದೀಗ ಈ ವೈಜ್ಞಾನಿಕ ಕಾಮಗಾರಿಗೆ ಒಳಪಡುತ್ತಿದ್ದು, ಮೊದಲಿದ್ದ ಸ್ಥಳದಿಂದ ನಾಲ್ಕು ಫೀಟ್ ಎತ್ತರಕ್ಕೆ ಏರಲಿದೆ.
ಇದಕ್ಕೆ ಸುಮಾರು ನಾಲ್ಕರಿಂದ ಐದು ಲಕ್ಷ ರು. ಖರ್ಚಾಗುತ್ತದೆ. ಭಾರೀ ಮಳೆಯ ಸಂದರ್ಭ ಇಲ್ಲಿನ ಬೈಲಗುತ್ತು ಹಾಗೂ ಬೊಳಮೆಯ ತಗ್ಗು ಪ್ರದೇಶಗಳಲ್ಲಿ ನೆರೆಬರುವುದು ಸಾಮಾನ್ಯವಾಗಿದ್ದರಿಂದ ಈ ತಂತ್ರದ ಮೊರೆ ಹೋಗಲಾಗಿದೆ. ದೆಹಲಿ ಮೂಲದ ಹರಿ ಓಂ ಶಿವ ಹೌಸ್ ಲಿಫ್ಟಿಂಗ್ ಕನ್ಸ್ಟ್ರಕ್ಷನ್ ಈ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿದ್ದು ಇಂತಹ ಪ್ರಯೋಗ ಕರ್ನಾಟಕದಲ್ಲಿ ನಡೆಯುತ್ತಿರುವುದು ಮೊದಲ ಬಾರಿ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.