
ನವದೆಹಲಿ (ಏ.21): ಪ್ಯಾನ್ ಕಾರ್ಡ್ ಪಡೆಯಲು ಆಧಾರ್ ಕಾರ್ಡನ್ನು ಕಡ್ಡಾಯ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಸಿಡಿಮಿಡಿಗೊಂಡಿದೆ.
ನಾವು ಆಧಾರ್ ಕಾರ್ಡನ್ನು ಐಚ್ಛಿಕವೆಂದು ಆದೇಶ ಹೊರಡಿಸಿರುವ ಹೊರತಾಗಿಯೂ ನೀವು ಅದನ್ನು ಕಡ್ಡಾಯ ಮಾಡಿರುವುದು ಏಕೆ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಬ್ಯಾಂಕ್ ಖಾತೆ ತೆರೆಯಲು, ಪಾಸ್ಪೋರ್ಟ್ ಪಡೆಯಲು, ಮೊಬೈಲ್ ಸಂಪರ್ಕ ಪಡೆಯಲು ಸರ್ಕಾರ ಆಧಾರ್ ಕಾರ್ಡನ್ನು ಕಡ್ಡಾಯಗೊಳಿಸಬಹುದು ಎಂದು ಕಳೆದ ತಿಂಗಳು ಸುಪ್ರೀ ಕೋರ್ಟ್ ಹೇಳಿತ್ತು. ಆದರೆ ಪ್ಯಾನ್ ಕಾರ್ಡ್ ಅಥವಾ ಕಲ್ಯಾಣ ಯೋಜನೆಗಳಿಗೆ ಅದನ್ನು ಕಡ್ಡಾಯಗೊಳಿಸುವಂತಿಲ್ಲವೆಂದು ಸುಪ್ರೀಂ ಹೇಳಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.