ನನ್ನ ಮಗನ ಸಾವನ್ನು ಅಣಕ ಮಾಡಿ ಟ್ರೋಲ್ ಮಾಡಿದ್ರೆ ಹೇಗೆ ಸಹಿಸಿಕೊಳ್ಳೋದು?

Published : Nov 23, 2017, 12:31 PM ISTUpdated : Apr 11, 2018, 12:44 PM IST
ನನ್ನ ಮಗನ ಸಾವನ್ನು ಅಣಕ ಮಾಡಿ ಟ್ರೋಲ್ ಮಾಡಿದ್ರೆ ಹೇಗೆ ಸಹಿಸಿಕೊಳ್ಳೋದು?

ಸಾರಾಂಶ

ಟ್ರೋಲ್ ಗೂಂಡಾಗಿರಿ ವಿರುದ್ಧ ನಟ ಪ್ರಕಾಶ್ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ನ.23): ಟ್ರೋಲ್ ಗೂಂಡಾಗಿರಿ ವಿರುದ್ಧ ನಟ ಪ್ರಕಾಶ್ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ರೋಲ್ ಗೂಂಡಾಗಿರಿ ವಿರುದ್ಧ #just asking ಹೆಸರಲ್ಲಿ ನನ್ನ ಹೋರಾಟ ಮುಂದುವರೆಯುತ್ತದೆ.  ಯಾವುದೇ ಹೇಳಿಕೆಗಳನ್ನ ಕೊಟ್ಟರು, ಟ್ರೋಲ್ ಮೂಲಕ ಹತ್ತಿಕ್ಕಲಾಗುತ್ತಿದೆ.  ಇದು ಒಂದು ರೀತಿಯ ಗೂಂಡಾ ಪ್ರವೃತ್ತಿ ಎಂದು ಪ್ರಕಾಶ್ ರೈ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.

ನನ್ನ ರಿಯಲ್ ಲೈಫ್'ನಲ್ಲೂ ಖಳನಾಯಕ ಅಂತ ಕರೆಯೋದಕ್ಕೆ ಶುರು ಮಾಡಿದ್ದಾರೆ. ನೀನು ನಟನೇ ಅಲ್ಲ ತಮಿಳುನಾಡಿಗೆ ಹೋಗು ಅಂತಾರೆ. ಪದ್ಮಾವತಿ ಚಿತ್ರದ ನಟಿ ದೀಪಿಕಾ ಮೂಗು ಕತ್ತರಿಸ್ತೀವಿ ಅಂತಾರೆ.  ಇಂತಹ ಟ್ರೋಲ್ ವಿರುದ್ಧ ನಾನು ಧ್ವನಿ ಎತ್ತಬೇಕು ಅಂದುಕೊಂಡಿದ್ದೇನೆ. #Just asking ಹೆಸರಿನಲ್ಲಿ ನನ್ನ ಪ್ರತಿಭಟನೆ ಶುರುವಾಗಲಿದೆ ಎಂದು ಪ್ರಕಾಶ್ ರೈ ಹೇಳಿದ್ದಾರೆ.

ಸಂಸದ ಪ್ರತಾಪ್ ಸಿಂಹ ವಿರುದ್ಧ ನಟ ಪ್ರಕಾಶ್ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ. ಪ್ರತಾಪ್ ಸಿಂಹ್'ಗೆ ಲೀಗಲ್ ನೋಟೀಸ್ ಕಳುಹಿಸುತ್ತಿದ್ದೇನೆ.  ಇದು ಯಾವುದೇ ಪಕ್ಷದ ವಿರುದ್ಧ ಅಲ್ಲ, ಕೇವಲ ವ್ಯಕ್ತಿಯ ವಿರುದ್ಧ ಅಷ್ಟೇ.  ನನ್ನ ಮಗನ ಸಾವನ್ನು ಅಣಕ ಮಾಡಿ ಟ್ರೋಲ್ ಮಾಡಿದ್ರೆ ಹೇಗೆ ಸಹಿಸಿಕೊಳ್ಳೋದು? ನಾವು ಎಲ್ಲಿಗೆ ತಲುಪಿದ್ದೀವಿ?  ಪ್ರಕಾಶ್ ರೈ ಪ್ರಶ್ನಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ರಿಶ್ಚಿಯನ್ನರ ಮೇಲೆ ದಾಳಿ, ಕ್ರಿಸ್‌ಮಸ್ ದಿನವೇ ನೈಜೀರಿಯಾ ಮೇಲೆ ಬಾಂಬ್‌ ದಾಳಿ ಮಾಡಿದ ಅಮೆರಿಕ!
ಮೈಸೂರು ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್‌ ಸ್ಫೋಟ, ಹಲವು ಆಯಾಮದಲ್ಲಿ ಪೊಲೀಸರ ತನಿಖೆ!