
ಮುಂಬೈ(ಆ.31): ಕ್ರಿಕೆಟರ್ ಅಂಬಾಟಿ ರಾಯುಡು ಇದೀಗ ಹಿರಿಯ ನಾಗರಿಕರ ಮೇಲೆ ಹಲ್ಲೆ ನಡೆಸಿರುವ ಆರೋಪಕ್ಕೀಡಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲಾತಾಣಗಳಲ್ಲಿ ರಾಯುಡು ಹಿರಿಯ ವ್ಯಕ್ತಿಯೊಬ್ಬರನ್ನು ಥಳಿಸುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ.
ಆರೋಪವೇನು?
ಬೆಳಗ್ಗಿನ ಜಾವ ಕ್ರಿಕೆಟರ್ ರಾಯುಡು ವೇಗವಾಗಿ ತಮ್ಮ ಕಾರು ಚಲಾಯಿಸುತ್ತಿದ್ದರು. ಈ ಸಂದರ್ಭದಲ್ಲಿ ವಾಕಿಂಗ್'ಗೆ ತೆರಳುತ್ತಿದ್ದ ಕೆಲ ನಾಗರಿಕರಿಗೆ ಕಾರಿನಿಂದ ಗುದ್ದಿದ್ದಾರೆ. ಇದರಿಂದ ಕೋಪಗೊಂಡ ಹಿರಿಯರು ರಾಯುಡುಗೆ ಬುದ್ಧಿವಾದ ಹೇಳಿದ್ದಾರೆ. ಇವರ ಮಾತಿನಿಂದ ಅಸಾಮಾಧಾನಗೊಂಡ ರಾಯುಡು ತನ್ನ ತಪ್ಪಿದ್ದರೂ ಕಾರಿನಿಂದ ಹೊರಬಂದು ವೃದ್ಧರ ಮೇಲೆ ಹಲ್ಲೆ ನಡೆಸಿದ್ದಾರೆ.
ಸ್ಥಳದಲ್ಲಿದ್ದವರು ರಾಯುಡುವನ್ನು ಸಮಾಧಾನಪಡಿಸಲು ಯತ್ನಿಸಿದ್ದಾರೆ. ಆದರೆ ಹಲ್ಲೆಗೀಡಾದ ವೃದ್ಧರು ಈಗಾಗಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ಕುರಿತಾಗಿ ಬಿಸಿಸಿಐಗೂ ದೂರು ನೀಡುವುದಾಗಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.