
ಆಕೆ ಜೀವನದಲ್ಲಿ ಸಾಕಷ್ಟು ನೋವು ಅನುಭವಿಸಿದ್ದ ಮಹಿಳೆ. ನಾಲ್ಕು ವರ್ಷಗಳ ಅವಧಿಯಲ್ಲಿ ಎರಡು ಮದುವೆಗಳು ಮುರಿದುಬಿದ್ದಿದ್ದು, ಇಬ್ಬರು ಪತಿಗಳು ಆಕೆಯನ್ನು ತೊರೆದಿದ್ದರು. ಈ ನೋವಿನ ನಡುವೆಯೇ, ಆಕೆಯ ಜೀವನದಲ್ಲಿ ಹೊಸ ಆಶಾಕಿರಣವಾಗಿ ಕಾಣಿಸಿಕೊಂಡವರುಅದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಸಹೋದ್ಯೋಗಿ.
ಇಬ್ಬರೂ ಖಾಸಗಿ ಸಾಫ್ಟ್ವೇರ್ ಕಂಪನಿಯಲ್ಲಿ ಎಚ್ಆರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ನಡುವೆ ಬೆಳೆದ ಸ್ನೇಹ ಪ್ರೀತಿಗೆ ತಿರುಗಿ, ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಆದರೆ ಮದುವೆಯಾದ ಕೇವಲ ಮೂರು ತಿಂಗಳಲ್ಲೇ ದಾಂಪತ್ಯದಲ್ಲಿ ಬಿರುಕು ಮೂಡಿದೆ.
ಮಹಿಳೆಯ ಆರೋಪದ ಪ್ರಕಾರ, ಮೂರನೇ ಪತಿಯಾಗಿ ಜೀವನಕ್ಕೆ ಬಂದ ವ್ಯಕ್ತಿಯೂ ಸಹ ವಿಚಿತ್ರ ವರ್ತನೆ ತೋರಲು ಆರಂಭಿಸಿದ್ದಾನೆ. ಆತನ ನಡೆನುಡಿಗಳು ಆಕೆಗೆ ಮಾನಸಿಕ ಕಿರಿಕಿರಿ ಹಾಗೂ ಮುಜುಗರ ಉಂಟುಮಾಡಿದ್ದವು ಎನ್ನಲಾಗಿದೆ. ಈ ಕಿರುಕುಳವನ್ನು ಸಹಿಸಲಾಗದೇ, ಮದುವೆಯಾದ ನಾಲ್ಕು ತಿಂಗಳಲ್ಲೇ ಆಕೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ.
ಇದೀಗ ಪತಿ–ಪತ್ನಿ ಇಬ್ಬರೂ ಪರಸ್ಪರ ಗಂಭೀರ ಆರೋಪಗಳನ್ನು ಮಾಡುತ್ತಿದ್ದು, ಪ್ರಕರಣ ಕಾನೂನು ಹಂತಕ್ಕೆ ತಲುಪಿದೆ. ಈ ವಿವಾದದಲ್ಲಿ ಯಾರು ತಪ್ಪು, ಯಾರು ಸರಿ ಎನ್ನುವುದನ್ನು ಈಗಲೇ ನಿರ್ಧರಿಸುವುದು ಕಷ್ಟಸಾಧ್ಯವಾಗಿದೆ. ಕಾರಣ, ಇಬ್ಬರ ಆರೋಪಗಳಿಗೂ ಉತ್ತರಗಳು ಅವರವರಲ್ಲಿಯೇ ಅಡಗಿವೆ. ಈ ಪ್ರಕರಣದಲ್ಲಿ ಸತ್ಯ ಯಾವುದು ಎಂಬುದು ತನಿಖೆಯಿಂದಲೇ ಬಹಿರಂಗವಾಗಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.