ಗಡಿಯಲ್ಲಿ ಉಗ್ರರ ದಾಳಿಗೆ ಮೂವರು ಸೈನಿಕರು ಹುತಾತ್ಮ

Published : Dec 17, 2016, 02:15 PM ISTUpdated : Apr 11, 2018, 12:50 PM IST
ಗಡಿಯಲ್ಲಿ ಉಗ್ರರ ದಾಳಿಗೆ ಮೂವರು ಸೈನಿಕರು ಹುತಾತ್ಮ

ಸಾರಾಂಶ

ಜಮ್ಮು-ಶ್ರೀನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪ್ಯಾಂಪೋರ್‌'ನ ಕಡ್ಲಾಬಾಲ್‌'ನಲ್ಲಿ ಯೋಧರನ್ನು ಹೊತ್ತೊಯ್ಯುತ್ತಿದ್ದ ವಾಹನಗಳ ಮೇಲೆ ಉಗ್ರಗಾಮಿಗಳು ನಿರಂತರ ಗುಂಡಿನ ದಾಳಿ ಮಾಡಿದ್ದಾರೆ

ಶ್ರೀನಗರ(ಡಿ.17): ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿರುವ ಸೇನಾ ಬೆಂಗಾವಲು ಪಡೆಗಳ ಮೇಲಿನ ಉಗ್ರರ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ.

‘‘ಜಮ್ಮು-ಶ್ರೀನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪ್ಯಾಂಪೋರ್‌'ನ ಕಡ್ಲಾಬಾಲ್‌'ನಲ್ಲಿ ಯೋಧರನ್ನು ಹೊತ್ತೊಯ್ಯುತ್ತಿದ್ದ ವಾಹನಗಳ ಮೇಲೆ ಉಗ್ರಗಾಮಿಗಳು ನಿರಂತರ ಗುಂಡಿನ ದಾಳಿ ಮಾಡಿದ್ದಾರೆ,’’ ಎಂದು ಭದ್ರತಾ ಅಧಿಕಾರಿಗಳು ಹೇಳಿದ್ದಾರೆ.

ಮಧ್ಯಾಹ್ನದ ವೇಳೆ ಉಗ್ರರು ದಾಳಿ ನಡೆಸಿದ್ದರಿಂದ ಸಾರ್ವಜನಿಕರು ಓಡಾಡುತ್ತಿದ್ದರಿಂದ ಪ್ರತಿದಾಳಿ ಕೈಗೊಳ್ಳಲು ಸೇನೆ ಮುಂದಾಗಲಿಲ್ಲ. ಆದರೆ, ಉಗ್ರರನ್ನು ಹೊಡೆದೋಡಿಸಲಾಗಿದೆ ಎಂದು ಸಿಆರ್‌ಪಿಎಫ್‌ನ ಐಜಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಂಡ್ಯದಲ್ಲಿ ಸೆಮಿಕಂಡಕ್ಟರ್ ಕಂಪನಿಗೆ 100 ಎಕರೆ ಜಾಗ; ಕುಮಾರಸ್ವಾಮಿಗೆ ಎಂ.ಬಿ. ಪಾಟೀಲ ಪತ್ರ
ನಾಯಿ ಕಡಿತಕ್ಕೆ ಚಿಕಿತ್ಸೆ ಪಡೆದರೂ ಒಂದು ತಿಂಗಳ ನಂತರ ಬಾಲಕಿ ಸಾವು