
ಬೆಂಗಳೂರು(ಜ.12): ಪತ್ನಿಯ ಶೀಲ ಶಂಕಿಸಿ ಕೊಲ್ಲಲು ಯತ್ನಿಸಿದ ವ್ಯಕ್ತಿಯೊಬ್ಬ ಗಾಬರಿಗೊಂಡು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ.
ಚಾಕುವಿನಿಂದ ಹಲ್ಲೆಗೊಳಗಾಗಿರುವ ಪತ್ನಿ ಚಿತ್ರಾ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಟೋ ಚಾಲಕ ಪತಿ ಹೆನ್ರಿ ಫರ್ನಾಂಡಿಸ್ (35) ಮೃತಪಟ್ಟಿದ್ದಾನೆ.
ಕಳೆದ ಕೆಲ ತಿಂಗಳಿಂದ ದಂಪತಿ ನಡುವೆ ವಾಗ್ವಾದ ನಡೆಯುತ್ತಿದ್ದು, ಇಂದು ಚಿತ್ರಾಳನನ್ನ ಗಂಡ ಹೆನ್ರಿ ಕೆ.ಆರ್.ಪುರ ದೇವಸಂದ್ರದ ಪೋಷಕರ ಮನೆಯಿಂದ ರಾಮಮೂರ್ತಿನಗರದ ಸೆಂಟ್ ಅನ್ಸ್ ಶಾಲೆ ಬಳಿಯ ಮನೆಗೆ ಕರೆ ತಂದು ತಮ್ಮ ಇಬ್ಬರು ಮಕ್ಕಳನ್ನ ಶಾಲೆಗೆ ಕಳುಹಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಗಲಭೆ ನಡೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ ಕೆ.ಆರ್.ಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.