ನೆನಪಿರಲಿ: ಹೈದರಾಬಾದ್ ಕರ್ನಾಟಕಕ್ಕೆ ಹೊಸ ಹೆಸರು ನಾಮಕರಣ ಮಾಡಿದ ರಾಜ್ಯ ಸರ್ಕಾರ

Published : Sep 06, 2019, 09:43 PM ISTUpdated : Sep 06, 2019, 10:17 PM IST
ನೆನಪಿರಲಿ: ಹೈದರಾಬಾದ್ ಕರ್ನಾಟಕಕ್ಕೆ ಹೊಸ ಹೆಸರು ನಾಮಕರಣ ಮಾಡಿದ ರಾಜ್ಯ ಸರ್ಕಾರ

ಸಾರಾಂಶ

ಹೈದರಾಬಾದ್ ಕರ್ನಾಟಕಕ್ಕೆ ಹೊಸ ಹೆಸರು ನಾಮಕರಣ ಮಾಡಿದ ರಾಜ್ಯ ಸರ್ಕಾರ|  ಹೈದರಾಬಾದ್ ಕರ್ನಾಟಕ ಬದಲು ಕಲ್ಯಾಣ ಕರ್ನಾಟಕ ಎಂದು ನಾಮಕರಣ|ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ.

ಬೆಂಗಳೂರು, (ಸೆ.06): ಹೈದರಾಬಾದ್ -ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಇನ್ನು ಮುಂದೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಶುಕ್ರವಾರ ಸಚಿವ ಸಂಪುಟ ಸಭೆ ಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ಈ ಬಗ್ಗೆ  ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಸಚಿವ  ಜೆ.ಸಿ ಮಾಧುಸ್ವಾಮಿ, ಇನ್ನು ಮುಂದೆ ಹೈದರಾಬಾದ್-ಕರ್ನಾಟಕ ಅಭಿವೃದ್ಧಿ ಮಂಡಳಿಯು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಎಂದು ಮರುನಾಮಕರಣ ಮಾಡಲಾಗಿದೆ. ಅಲ್ಲಿನ ಜನರು ಮತ್ತು ಜನಪ್ರತಿನಿಧಿಗಳ ಒತ್ತಾಯದಂತೆ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದರು.

ಇನ್ನು ಮುಂದೆ ಎಲ್ಲಾ ರಾಜ್ಯ ಸರ್ಕಾರಿ ದಾಖಲೆಗಳಲ್ಲೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಎಂದು ನಮೂದಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಹೈದರಾಬಾದ್-ಕರ್ನಾಟಕದ ವ್ಯಾಪ್ತಿಗೆ ಬರುವ ಜಿಲ್ಲೆಗಳಿಗೆ 371ಜೆ ಅಡಿ ವಿಶೇಷ ಸ್ಥಾನಮಾನ ಸಿಗುತ್ತಿದೆ. ಬೀದರ್, ಬಳ್ಳಾರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳು ಹೈದರಾಬಾದ್ ಕರ್ನಾಟಕದ ವ್ಯಾಪ್ತಿಗೆ ಸೇರುತ್ತವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಂದೇ ಮಾತರಂ ಚರ್ಚೆ ವೇಳೆ ಶಾ ವರ್ಸಸ್‌ ಖರ್ಗೆ
ಮೋದಿ ರೀತಿ ರೈತರಿಗೆ ಟ್ರಂಪ್‌ ಹಣ ವರ್ಗಾವಣೆ