
ಮಂಡ್ಯ(ಫೆ.02): ನನ್ನ ಕ್ಷೇತ್ರಕ್ಕೆ ನಾನು ಆಕಾಂಕ್ಷಿ ಅಲ್ಲ ನಾನೇ ಬಾಸು ಎಂದು ಶಾಸಕ ಅಂಬರೀಶ್ ಹೇಳಿದರು.
ಮದ್ದೂರಿನಲ್ಲಿ ಮಾತನಾಡಿದ ಅವರು, ಮಂಡ್ಯ ವಿಧಾನಸಭಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ. ಚುನಾವಣೆ ಬರ್ತಾ ಇದೆ, ಈಗ ನಾನು ಏಕೆ ಬೇರೆ ಪಕ್ಷಕ್ಕೆ ಈಗ ಹೋಗ್ಲಿ. ಕಾಂಗ್ರೆಸ್ ಪಕ್ಷದಲ್ಲಿ ನಮ್ಮನ್ನು ಬೇಕಾದರೆ ಬಳಸಿಕೊಳ್ಳಬೇಕು. ಮಂಡ್ಯದಲ್ಲಿ ಯಾರಿಗಾದರೂ ಟಿಕೆಟ್ ಕೊಡಲಿ ಕೆಲಸ ಮಾಡಲಿದ್ದೇವೆ. ನಟಿ ರಮ್ಯಾಗಾದ್ರೂ ಕೊಡ್ಲಿ, ಎಸ್.ಎಂ. ಕೃಷ್ಣಾಗಾದರೂ ಕೊಡಲಿ, ಮಹೇಶ್ ಚಂದ್ರ ಅವರಿಗಾದರೂ ನನಗಾದರೂ ಕೊಡಲಿ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡ್ತೇನೆ ಎಂದು ಹೇಳಿದರು.
ಶೇ. 100 ರಷ್ಟು ಎಲ್ಲರೂ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡಬೇಕು. ಕ್ಷೇತ್ರಕ್ಕೆ ಭೇಟಿ ಕೊಡದಿದ್ದರೂ ಸಹ ಕ್ಷೇತ್ರದಲ್ಲಿ ಕೆಲಸ ಆಗುವುದು ಮುಖ್ಯ. ರಾಜ್ಯ ಸಚಿವ ಸಂಪುಟದಲ್ಲಿ ಆಗಬೇಕಾದ ಕೆಲಸವನ್ನು ಮಾಡಿಸುತ್ತೇನೆ. ಅದು ಮಂಡ್ಯ ಆಗಲಿ, ಮದ್ದೂರು ಆಗಲಿ, ಇಡೀ ಮಂಡ್ಯ ಜಿಲ್ಲೆಗೇ ಕೆಲಸ ಮಾಡಿಸುತ್ತೇನೆ. ಮಂಡ್ಯದಲ್ಲಿ ನೀರಾವರಿ ಯೋಜನೆಗಳನ್ನು ಸಹ ನಾನು ಮಾಡಿಸಿದ್ದೇನೆ' ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.