
ಬೆಂಗಳೂರು(ಡಿ.06): ಮಂಡ್ಯದ ಅಭಿಮಾನಿಯೊಬ್ಬರು ತನ್ನ ಹೆಸರಲ್ಲಿ ಕ್ಯಾಂಟೀನ್ ಪ್ರಾರಂಭ ಮಾಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಚಿತ್ರನಟಿ, ಮಾಜಿ ಸಂಸದೆ ರಮ್ಯಾ ಅಲ್ಲಿ ಊಟ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ.
ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ‘ಇದು ನಿಜಕ್ಕೂ ಖುಷಿಯ ವಿಚಾರ, ಸಮಯ ಸಿಕ್ಕಾಗ ಒಂದು ದಿನ ಅಲ್ಲಿ ಊಟ ಮಾಡುವೆ’ ಎಂದು ಟ್ವೀಟ್ ಮಾಡಿದ್ದಾರೆ. ಇಂದಿರಾ ಕ್ಯಾಂಟೀನ್, ಅಪ್ಪಾಜಿ ಕ್ಯಾಂಟೀನ್'ಗಳಿಂದ ಪ್ರೇರಿತರಾದ ರಮ್ಯಾ ಅಭಿಮಾನಿ ರಘು ಎಂಬವರು ಮಂಡ್ಯ ನಗರದ ಅಶೋಕನಗರ 3ನೇ ಕ್ರಾಸ್ನಲ್ಲಿ ರಮ್ಯಾ ಕ್ಯಾಂಟೀನ್ ಪ್ರಾರಂಭಿಸಿ ರಿಯಾಯಿತಿ ದರದಲ್ಲಿ ಉಪಾಹಾರ, ಊಟ ಒದಗಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.