
ನವದೆಹಲಿ (ಫೆ.07): ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ತಮಿಳುನಾಡು ಸಿಎಂ ಆಗುವುದನ್ನು ತೀವ್ರವಾಗಿ ಖಂಡಿಸಿದ್ದು, ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಜಯಲಲಿತಾ ಸೊಸೆ ದೀಪಾ ಜಯಕುಮಾರ್ ಹೇಳಿದ್ದಾರೆ.
ಜಯಲಲಿತಾರ ಜೊತೆ 33 ವರ್ಷ ಒಡನಾಟ ಹೊಂದಿರುವುದು ತಮಿಳುನಾಡು ಮುಖ್ಯಮಂತ್ರಿಯಾಗುವುದಕ್ಕೆ ಮಾನದಂಡವಲ್ಲ. ಜನರು ಕೂಡಾ ಅವರಿಗೆ ಮತ ನೀಡಬಾರದು. ಕೆಲವು ಪಕ್ಷಗಳ ನಾಯಕರು ಶಶಿಕಲಾಗೆ ಹೆದರಿ ಸುಮ್ಮನಿದ್ದಾರೆ. ಆದರೆ ನಾನು ಹೆದರುವುದಿಲ್ಲ ಎಂದು ದೀಪಾ ಜಯಕುಮಾರ್ ಗುಡುಗಿದ್ದಾರೆ.
ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಶಶಿಕಲಾ ಸ್ಪರ್ಧಿಸುವ ಕ್ಷೇತ್ರದಿಂದಲೇ ನಾನು ಸ್ಪರ್ಧಿಸಬೇಕೆಂದಿಲ್ಲ. ನಾನವರಿಗೆ ಹೆದರುವುದಿಲ್ಲ.ಶಶಿಕಲಾ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ದಿನ ತಮಿಳರ ಪಾಲಿಗೆ ಕರಾಳ ದಿನವಾಗಿದೆ.
ರಾಜ್ಯದಲ್ಲಿ ಅತಂತ್ರ ಸ್ಥಿತಿಯಿದ್ದು, ಶಶಿಕಲಾ ಸಿಎಂ ಆಗುವುದರಿಂದ ಜನರು ಚಿಂತೆಗೀಡಾಗಿದ್ದಾರೆ ಎಂದು ದೀಪಾ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.