ಸಚಿವ ಸ್ಥಾನ ಕೊಟ್ಟರೂ ಬೇಡ: ಜಾರಕಿಹೊಳಿ

Published : Jun 10, 2018, 11:04 AM IST
ಸಚಿವ ಸ್ಥಾನ ಕೊಟ್ಟರೂ ಬೇಡ: ಜಾರಕಿಹೊಳಿ

ಸಾರಾಂಶ

ಜೆಡಿಎಸ್‌- ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ 2ನೇ ಹಂತದ ಸಂಪುಟ ವಿಸ್ತರಣೆಯಲ್ಲಿ ನನಗೆ ಹೈಕಮಾಂಡ್‌ ಸಚಿವ ಸ್ಥಾನ ನೀಡಿದರೂ ನಾನು ಸ್ವೀಕರಿಸುವುದಿಲ್ಲ. ಪಕ್ಷದಲ್ಲಿ ಯಾವುದೇ ಹುದ್ದೆಯೂ ನನಗೆ ಬೇಡ. ಸಾಮಾನ್ಯ ಶಾಸಕನಾಗಿ ಪಕ್ಷದ ಸಂಘಟನೆಗೆ ಶ್ರಮಿಸುತ್ತೇನೆ ಎಂದು ಸಚಿವ ಸ್ಥಾನ ಸಿಗದೆ ಅತೃಪ್ತಗೊಂಡಿರುವ ಯಮಕನಮರಡಿ ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.  

ಬೆಳಗಾವಿ :  ಜೆಡಿಎಸ್‌- ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ 2ನೇ ಹಂತದ ಸಂಪುಟ ವಿಸ್ತರಣೆಯಲ್ಲಿ ನನಗೆ ಹೈಕಮಾಂಡ್‌ ಸಚಿವ ಸ್ಥಾನ ನೀಡಿದರೂ ನಾನು ಸ್ವೀಕರಿಸುವುದಿಲ್ಲ. ಪಕ್ಷದಲ್ಲಿ ಯಾವುದೇ ಹುದ್ದೆಯೂ ನನಗೆ ಬೇಡ. ಸಾಮಾನ್ಯ ಶಾಸಕನಾಗಿ ಪಕ್ಷದ ಸಂಘಟನೆಗೆ ಶ್ರಮಿಸುತ್ತೇನೆ ಎಂದು ಸಚಿವ ಸ್ಥಾನ ಸಿಗದೆ ಅತೃಪ್ತಗೊಂಡಿರುವ ಯಮಕನಮರಡಿ ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಪಕ್ಷದ ಹೈಕಮಾಂಡ್‌ ಬುಲಾವ್‌ ನೀಡಿಲ್ಲ. ಎಲ್ಲ ಅತೃಪ್ತ ಶಾಸಕರ ಪರವಾಗಿ ಮಾಜಿ ಸಚಿವ ಎಂ.ಬಿ. ಪಾಟೀಲ ಹೈಕಮಾಂಡ್‌ ಬಳಿಗೆ ತೆರಳಿದ್ದಾರೆ. ಅವರೇ ಎಲ್ಲ ವಿಚಾರಗಳನ್ನು ಹೈಕಮಾಂಡ್‌ ಎದುರು ಮಂಡಿಸುವರು. ಜೂ.11ರಂದು ಮತ್ತೊಂದು ಅತೃಪ್ತ ಶಾಸಕರ ಸಭೆ ನಡೆಯಲಿದ್ದು, ನಂತರ ಮುಂದಿನ ರಾಜಕೀಯ ನಡೆ ಕುರಿತು ತೀರ್ಮಾನಿಸಲಾಗುವುದು ಎಂದರು.

ರಮೇಶ ನಂಬಿಕೆಗೆ ಅರ್ಹರಲ್ಲ:  ಸಚಿವ ರಮೇಶ ಜಾರಕಿಹೊಳಿ ನನಗಾಗಿ ಸಚಿವ ಸ್ಥಾನ ತ್ಯಾಗ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ, ಅವರು ನುಡಿದಂತೆ ನಡೆದುಕೊಳ್ಳುವ ಮನುಷ್ಯನಲ್ಲ. ವಿನಾಕಾರಣ ಸಚಿವ ಸ್ಥಾನ ತ್ಯಾಗ ಮಾಡುವುದಾಗಿ ದಿಕ್ಕು ತಪ್ಪಿಸುತ್ತಿದ್ದಾರೆ. ಕಳೆದ 40 ವರ್ಷಗಳಿಂದ ನಾನು ರಮೇಶ ಅವರನ್ನು ಬಲ್ಲವನಾಗಿದ್ದು, ಅವರ ಹೇಳಿಕೆಯಿಂದ ಏನೂ ಆಗದು. ನಾವು ಜಾಗೃತರಾಗಬೇಕಿದೆ ಎಂದು ಹೇಳಿದರು.

ಪ್ರತಿಭಟನೆ ತಡೆಯಲಾರೆ:  ನನಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಮಾನವ ಬಂಧುತ್ವ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಬೀದಿಗಿಳಿದು ರಾಜ್ಯಾದ್ಯಂತ ಹೋರಾಟ ನಡೆಸುತ್ತಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಎಲ್ಲ ಸಂಘಟನೆಗಳು ಹೋರಾಟ ಮಾಡುತ್ತಿವೆ. ಅದನ್ನು ನಾನು ತಡೆಯುವುದಿಲ್ಲ ಎಂದು ಹೇಳಿದರು.

ವಿಧಾನಸಭೆ ಚುನಾವಣೆಯಲ್ಲಿ ನಾನು ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದೇನೆ ಹೊರತು, ಯಾವೊಬ್ಬ ಅಭ್ಯರ್ಥಿಯ ಸೋಲಿಗೆ ನಾನು ಕಾರಣನಲ್ಲ. ಆದರೆ, ಕೆಲ ಮಾಧ್ಯಮಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಸೋಲಿಗೆ ನಾನೇ ಕಾರಣ ಎಂಬಂತೆ ಸುದ್ದಿ ಬರುತ್ತಿವೆ. ಇದು ಊಹಾಪೋಹದ ವರದಿಯಾಗಿದೆ ಎಂದು ಪ್ರತಿಕ್ರಿಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಗ್ರಾಹಕರಿಗೆ ಬಂಪರ್‌ ಪ್ಲ್ಯಾನ್‌ ಘೋಷಿಸಿದ Vi: 61 ರೂಪಾಯಿಯ ಮೊಬೈಲ್‌ ರಿಚಾರ್ಜ್‌ಗೆ 25 ಸಾವಿರದ ಬೆನಿಫಿಟ್‌!