ರವಿ ಬೆಳಗೆರೆ ಬಂಧನದ ಬಗ್ಗೆ ಈಗಲೇ ಪ್ರತಿಕ್ರಿಯಿಸುವುದಿಲ್ಲ: ರಾಮಲಿಂಗಾರೆಡ್ಡಿ

Published : Dec 08, 2017, 04:29 PM ISTUpdated : Apr 11, 2018, 01:07 PM IST
ರವಿ ಬೆಳಗೆರೆ ಬಂಧನದ ಬಗ್ಗೆ ಈಗಲೇ ಪ್ರತಿಕ್ರಿಯಿಸುವುದಿಲ್ಲ: ರಾಮಲಿಂಗಾರೆಡ್ಡಿ

ಸಾರಾಂಶ

ರವಿ ಬೆಳಗೆರೆ ಬಂಧನ ಹಿನ್ನೆಲೆಯಲ್ಲಿ  ತಾಹೀರ್'ನನ್ನು ಪೊಲೀಸರು ಬಂಧಿಸಿದಾಗ ಸುಪಾರಿ ಕಿಲ್ಲರ್  ಶಶಿಧರ್ ಮುಂಡೇವಾಡಗೆ ಗನ್ ಮಾರಿದ್ದ ಎಂಬುದು ಮಾಹಿತಿ ಸಿಕ್ಕಿದೆ. ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ನಡೆಸುವ ವೇಳೆ ಈ ಮಾಹಿತಿ ಸಿಕ್ಕಿದೆ.

ಬೆಂಗಳೂರು (ಡಿ.08): ರವಿ ಬೆಳಗೆರೆ ಬಂಧನ ಹಿನ್ನೆಲೆಯಲ್ಲಿ  ತಾಹೀರ್'ನನ್ನು ಪೊಲೀಸರು ಬಂಧಿಸಿದಾಗ ಸುಪಾರಿ ಕಿಲ್ಲರ್  ಶಶಿಧರ್ ಮುಂಡೇವಾಡಗೆ ಗನ್ ಮಾರಿದ್ದ ಎಂಬುದು ಮಾಹಿತಿ ಸಿಕ್ಕಿದೆ. ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ನಡೆಸುವ ವೇಳೆ ಈ ಮಾಹಿತಿ ಸಿಕ್ಕಿದೆ. ತಾಹೀರ್ ವೆಪನ್ ಸೆಲ್ಲರ್ ಮಾತ್ರ. ಆದರೆ ಬೆಳಗೆರೆ ಬಂಧನಕ್ಕೂ ಗೌರಿ ಹತ್ಯೆ ಪ್ರಕರಣಕ್ಕೂ ಸಂಬಂಧ ಇಲ್ಲ. ಬೆಳಗೆರೆ ಬಂಧನ ವಿಚಾರ ಎಲ್ಲವೂ ಪೊಲೀಸ್ ಪ್ರಕ್ರಿಯೆಯಾಗಿದ್ದು ಮಾಹಿತಿ ಇದ್ದ ಕಾರಣದಿಂದಲೇ ಈ ಪ್ರಕ್ರಿಯೆ ಆಗಿರುತ್ತದೆ. ಮಾಹಿತಿ ಇಲ್ಲದೇ ಏನೂ ಅಗುವುದಿಲ್ಲ.  

ಕಳೆದ ಭಾನುವಾರ ತಾಹೀರ್'ನನ್ನು ಸಿಸಿಬಿಯವರು ಬಂಧಿಸಿದ್ದರು. ಬಂಧಿಸಿದ ಬಳಿಕ ಯಾರ್ಯಾರಿಗೆ ಗನ್ ಮಾರಿದ್ದಾನೆ ಎಂಬುದು ತನಿಖೆ ಮಾಡಿದಾಗ ಶಶಿಧರ್ ಮುಂಡೆವಾಡಿಗೆ ಗನ್ ಮಾರಿದ್ದು ಮಾಹಿತಿ ಸಿಕ್ಕಿದೆ.  ಅದರಂತೆ ಶಶಿಧರ್ ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸಿಸಿಬಿಗೆ ಕೆಲವು ಮಾಹಿತಿ ಸಿಕ್ಕಿದೆ.  ಅದರಂತೆ ಇಂದಿನ ಬಂಧನ ಪ್ರಕ್ರಿಯೆ ನಡೆದಿದೆ. ಶಶಿಧರ್ ಮುಂಡೇವಾಡಿ ಬಳಸಿದ್ದ ಗನ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅದರ ವರದಿ ಬಂದ ಬಳಿಕ ಆ ಗನ್ ಎಲ್ಲೆಲ್ಲಿ ಬಳಕೆಯಾಗಿದೆ ಅಂತ ತಿಳಿಯಲಿದೆ.  ಬೆಳಗರೆ ಬಂಧನದ ಬಗ್ಗೆ ತನಿಖೆ ಬಗ್ಗೆ ನಾನು ಪ್ರತಿಕ್ರಿಯೆ ಕೊಡೋದು ಸರಿಯಲ್ಲ. ಈ ಬಗ್ಗೆ ಪೊಲೀಸ್ ಆಯುಕ್ತರು ಅಥವಾ ಸಿಸಿಬಿಯವರು ಮಾಹಿತಿ ನೀಡುತ್ತಾರೆ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಸುವರ್ಣ ನ್ಯೂಸ್'ಗೆ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಿಎಫ್ ಹಣ ಹಿಂಪಡೆಯುವ ನೀತಿಯಲ್ಲಿ 11 ಬದಲಾವಣೆ, EPFO 3.0 ನಿಯಮ ಜಾರಿ
ಕ್ರಿಸ್ಮಸ್ ಹಬ್ಬಕ್ಕೆ ಭಾರತದ ಹಲವು ನಗರದಲ್ಲಿ ಡ್ರೈ ಡೇ; ಮದ್ಯದಂಗಡಿ, ಬಾರ್ ತೆರೆದಿರುತ್ತಾ?