ಯದುವೀರ್ ಒಡೆಯರ್ ರಾಜಕೀಯಕ್ಕೆ ಎಂಟ್ರಿ : ನಿಜಾನಾ..?

Published : Sep 08, 2018, 02:08 PM ISTUpdated : Sep 09, 2018, 10:03 PM IST
ಯದುವೀರ್ ಒಡೆಯರ್ ರಾಜಕೀಯಕ್ಕೆ ಎಂಟ್ರಿ : ನಿಜಾನಾ..?

ಸಾರಾಂಶ

ರಾಜಕೀಯ ಪ್ರವೇಶ ಸದ್ಯಕ್ಕಿಲ್ಲ, ರಾಜಕೀಯದಲ್ಲಿ ಆಸಕ್ತಿ ಇಲ್ಲ.  ರಾಜಮನೆತನದ ಪರಂಪರೆ ಉಳಿಸಿಕೊಂಡು ಹೋಗುವ ಜವಾಬ್ದಾರಿ ನನ್ನ ಮೇಲಿದೆ ಎಂದು  ಹಾಸನದಲ್ಲಿ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಹೇಳಿಕೆ ನೀಡಿದ್ದಾರೆ.

ಹಾಸನ : ರಾಜಕಾರಣಕ್ಕೆ ಮೈಸೂರು ಮಹಾರಾಜ ಯದುವೀರ್ ಒಡೆಯರ್ ಪ್ರವೇಶ ಮಾಡುತ್ತಾರಾ ಎನ್ನುವ ಸುದ್ದಿ ಇದೀಗ ಹೆಚ್ಚು ಸದ್ದು ಮಾಡುತ್ತಿದ್ದು,  ಇದೇ ವೇಳೆ ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. 

ರಾಜಕೀಯ ಪ್ರವೇಶ ಸದ್ಯಕ್ಕಿಲ್ಲ, ರಾಜಕೀಯದಲ್ಲಿ ಆಸಕ್ತಿ ಇಲ್ಲ.  ರಾಜಮನೆತನದ ಪರಂಪರೆ ಉಳಿಸಿಕೊಂಡು ಹೋಗುವ ಜವಾಬ್ದಾರಿ ನನ್ನ ಮೇಲಿದೆ ಎಂದು  ಹಾಸನದಲ್ಲಿ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಹೇಳಿಕೆ ನೀಡಿದ್ದಾರೆ.

ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುತ್ತಾರೆ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದ್ದು, ರಾಜಕೀಯ ಸೇರುವ ವದಂತಿ ಕೇವಲ ಊಹಾಪೋಹ ಅಷ್ಟೇ. ಜನ ಸೇವೆ ಮಾಡಲು ರಾಜಕೀಯ ಬಿಟ್ಟು ಬೇರೆ ಕ್ಷೇತ್ರಗಳಿವೆ ಎಂದಿದ್ದಾರೆ. 

ಅಲ್ಲದೇ ಇದೇ ವೇಳೆ ಭಾರೀ ಪ್ರವಾಹದಿಂದ ತತ್ತರಿಸಿದ್ದ  ಮಡಿಕೇರಿಗೆ ಶೀಘ್ರದಲ್ಲೇ ಭೇಟಿ ನೀಡುವುದಾಗಿಯೂ ಕೂಡ ಅವರು ಈ ವೇಳೆ ತಿಳಿಸಿದ್ದಾರೆ. 

ಇನ್ನು ರಾಜ ವಂಶಸ್ಥರಿಗೆ ಸರ್ಕಾರದಿಂದ ಗೌರವ ಧನ ನಿಷೇಧಿಸಬೇಕೆಂಬ ನಂಜರಾಜ ಅರಸ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಈ ವಿಚಾರವು ತಮ್ಮ  ಗಮನಕ್ಕೆ ಬಂದಿಲ್ಲ.  ಮೈಸೂರು ರಾಜಮನೆತನದ ಆಡಳಿತ ಮಂಡಳಿ ನೋಡಿಕೊಳ್ಳಲಿದೆ ಎಂದು ಒಡೆಯರ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ