ಮುಂದೆಯೂ ನಾನೇ ಸಿಎಂ: ಸಿದ್ದರಾಮಯ್ಯ

Published : Jun 02, 2017, 12:12 PM ISTUpdated : Apr 11, 2018, 01:02 PM IST
ಮುಂದೆಯೂ ನಾನೇ ಸಿಎಂ: ಸಿದ್ದರಾಮಯ್ಯ

ಸಾರಾಂಶ

ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರಿನ ಮೇಲೆ ಕಾಗೆ ಕುಳಿತರೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ, ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎಂದೆಲ್ಲಾ ಹಬ್ಬಿಸಿದರು. ಅದೆಲ್ಲವನ್ನೂ ಸುಳ್ಳಾಗಿಸಿದ್ದೇನೆ. ಮುಂದೆಯೂ ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದರು.

 ಬೆಂಗಳೂರು: ಕಾರಿನ ಮೇಲೆ ಕಾಗೆ ಕುಳಿತರೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ, ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎಂಬ ಮೂಢ ನಂಬಿಕೆಗಳನ್ನು ಸುಳ್ಳು ಮಾಡಿರುವ ನಾನೇ ಮುಂದೆಯೂ ಮುಖ್ಯಮಂತ್ರಿ ಆಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರಿನ ಮೇಲೆ ಕಾಗೆ ಕುಳಿತರೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ, ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎಂದೆಲ್ಲಾ ಹಬ್ಬಿಸಿದರು. ಅದೆಲ್ಲವನ್ನೂ ಸುಳ್ಳಾಗಿಸಿದ್ದೇನೆ. ಮುಂದೆಯೂ ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದರು.

ರಾಮನಗರದ ಅಮೂಲ್ಯ ಎಂಬ ವಿದ್ಯಾರ್ಥಿ, ರಾಜ್ಯದಲ್ಲಿ ಮೌಢ್ಯದಿಂದ ಮಕ್ಕಳ ಬಲಿ ಹೆಚ್ಚಾಗುತ್ತಿರುವ ಬಗ್ಗೆ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ದೇವರು ಎನ್ನುವುದು ನಂಬಿಕೆ. ಅದು ಬೇಕಿದ್ದರೆ ಇರಲಿ. ಆದರೆ ದೇವಪ್ಪ, ಶನಿ ಮಹಾತ್ಮ ಮೈಮೇಲೆ ಬರುತ್ತದೆ ಎನ್ನುವುದನ್ನು ನಂಬಬೇಡಿ. ಕಾರಿನ ಮೇಲೆ ಕಾಗೆ ಕುಳಿತರೆ ಅಧಿಕಾರ ಹೋಗುತ್ತದೆ ಎಂದರು. ಆದರೆ, ಮುಂದೆ ಏನಾಯ್ತು? ಏನೂ ಆಗಲಿಲ್ಲ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾತ್ರಿ ಕಣ್ಣೇ ಕಾಣೊಲ್ಲವೆಂದು ಹಗಲಿನಲ್ಲಿಯೇ ಕಿರುತೆರೆ ನಟ ಪ್ರವೀಣ್ ಮನೆಗೆ ಕನ್ನ ಹಾಕಿದ ಇರುಳು ಕುರುಡ!
ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ