
ಲಖನೌ(ಆ.01): ಬಿಜೆಪಿ ಅಧ್ಯಕ್ಷ ಪದವಿ ತೊರೆಯುವ ಪ್ರಶ್ನೆಯೇ ಇಲ್ಲ. ಅಧ್ಯಕ್ಷ ಹುದ್ದೆಯಲ್ಲಿ ‘ಸಂತೋಷ’ದಿಂದ ಹಾಗೂ ‘ತುಂಬುಹೃದಯ’ದಿಂದ ಕೆಲಸ ಮಾಡುತ್ತಿದ್ದೇನೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಶಾ ಇತ್ತೀಚೆಗೆ ರಾಜ್ಯಸಭೆಗೆ ನಾಮ ಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಶಾ ರಾಜೀನಾಮೆ ವದಂತಿ ಹರಡಿತ್ತು. ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಇದೆಲ್ಲ ಮಾಧ್ಯಮಗಳ ಕಪೋಲಕಲ್ಪಿತ ಸೃಷ್ಟಿ. ನಾನು ಬಿಜೆಪಿ ಅಧ್ಯಕ್ಷ ಹುದ್ದೆಯಲ್ಲಿ ನಿರಾಳವಾಗಿದ್ದೇನೆ’ ಎಂದು ಹೇಳಿದರು.
ಬಿಹಾರದಲ್ಲಿ ಸರ್ಕಾರ ಬೀಳಿಸುವುದರಲ್ಲಿ ಬಿಜೆಪಿ ಪಾತ್ರವಿಲ್ಲ. ಭ್ರಷ್ಟರೊಂದಿಗೆ ಇರಲಾಗದು ಎಂದು ನಿತೀಶ್ ಅವರು ಹೇಳಿ ಸರ್ಕಾರದಿಂದ ಹೊರಬಂದರೆ ನಾವೇನು ಮಾಡಲು ಸಾಧ್ಯ ಎಂದು ಅವರು ಪ್ರಶ್ನಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.