ಚುನಾವಣೆ ಆಹ್ವಾನ ತಿರಸ್ಕರಿಸಿದ ಕೈ ನಾಯಕ ಚೆಲುವರಾಯಸ್ವಾಮಿ

Published : Jul 29, 2019, 11:14 AM IST
ಚುನಾವಣೆ ಆಹ್ವಾನ ತಿರಸ್ಕರಿಸಿದ ಕೈ ನಾಯಕ  ಚೆಲುವರಾಯಸ್ವಾಮಿ

ಸಾರಾಂಶ

ತಾವು ಯಾವುದೇ ಕಾರಣಕ್ಕೂ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಶಾಸಕ ಚೆಲುವರಾಯಸ್ವಾಮಿ ಹೇಳಿದ್ದಾರೆ. 

ಬೆಂಗಳೂರು [ಜು.29]:  ರಾಜ್ಯದಲ್ಲಿ ಈಗಾಗಲೇ ಅತೃಪ್ತರಾಗಿ ರಾಜೀನಾಮೆ ನೀಡಿ ತೆರಳಿದ್ದ 17 ಮಂದಿ ಅನರ್ಹರಾಗಿದ್ದಾರೆ. ಈ ಕ್ಷೇತ್ರಗಳಿಗೆ ಶೀಘ್ರವೇ ಉಪ ಚುನಾವಣೆ ನಡೆಯಲಿದ್ದು, ಇದಕ್ಕೆ ತಮ್ಮ ಸ್ಪರ್ಧೆ ಇಲ್ಲ ಎಂದು ಕಾಂಗ್ರೆಸ್ ಮುಖಂಡ ಚೆಲುವರಾಯಸ್ವಾಮಿ ಹೇಳಿದ್ದಾರೆ. 

ಕೆ.ಆರ್.ಪೇಟೆ ಶಾಸಕ ನಾರಾಯಣ ಗೌಡ ಅನರ್ಹರಾಗಿದ್ದು, ಇವರ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ವುಚಾರ ಚರ್ಚೆಯಾಗುತ್ತಿದ್ದು, ಈಗಾಗಲೇ ಆಹ್ವಾನವನ್ನು  ನೀಡಲಾಗಿದೆ.  ಅಲ್ಲಿನವರು ತಮ್ಮನ್ನು ಆಹ್ವಾನಿಸುತ್ತಿದ್ದಾರೆ. ಆದರೆ ತಾವು ಸ್ಪರ್ಧೆ ಮಾಡುವುದಿಲ್ಲ ಎಂದು ಚೆಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ. 

BSY 100 ಪರ್ಸೆಂಟ್ ಗೆಲ್ತಾರೆ, ಅವರಿಗೆ ಶುಭವಾಗಲಿ : ಕಾಂಗ್ರೆಸ್ ನಾಯಕ

ಹಿಂದೆ ನಾಗಮಂಗಲದವರು ತಮ್ಮನ್ನು ತಿರಸ್ಕರಿಸಿದರು ಎಂದು ಇಲ್ಲಿಯವರು ಆಹ್ವಾನ ನೀಡುತ್ತಿರಬಹುದು. ಅದಕ್ಕೆ ತಾವು ಇಲ್ಲಿನ ಜನರಿಗೆ ಋಣಿಯಾಗಿರುತ್ತೇನೆ. ಆದರೆ ತಾವು ಉಪ ಚುನಾವಣೆಯಲ್ಲಿ ಮತ್ತೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಶಾಸಕ ಚೆಲುವರಾಯಸ್ವಾಮಿ ಹೇಳಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India News Live: IPL 2026 - ಪಂಜಾಬ್ ಕಿಂಗ್ಸ್ ಗೆಲ್ಲುತ್ತಿದ್ದಂತೆಯೇ ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದ ಮತ್ತೊಂದು ತಂಡ!
Karnataka News Live: ಮುಳ್ಳಯ್ಯನಗಿರಿಯಲ್ಲಿ ಸೃಷ್ಟಿಯಾಯ್ತು ‘ಮಿನಿ ಹಿಮಾಲಯ’ - ಮುಂಗಾರಿಗೂ ಮುನ್ನವೇ ಮಂಜಿನ ನಗರಿಯಾದ ಕಾಫಿನಾಡು!