
ಕಾಗವಾಡ: ರಾಜ್ಯದಲ್ಲಿ ಆಪರೇಷನ್ ಕಮಲದ ಊಹಾಪೋಹಗಳು ವ್ಯಾಪಕವಾಗಿ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕಾಗವಾಡ ಕ್ಷೇತ್ರ ಶಾಸಕ ಶ್ರೀಮಂತ ಪಾಟೀಲ, ಸಾವಿರಾರು ಕೋಟಿ ರುಪಾಯಿ ನೀಡಿದರೂ ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ ಎಂದು ತಿಳಿಸಿದ್ದಾರೆ.
ಶುಕ್ರವಾರ ಕೆಂಪವಾಡದ ಶಾಸಕರ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೆಲ ಶಾಸಕರು ಪಕ್ಷ ತೊರೆಯುದ ಬಗ್ಗೆ ವದಂತಿ ಹರಡು ತ್ತಿದ್ದು, ನನ್ನ ಹೆಸರನ್ನು ಅನವಶ್ಯಕವಾಗಿ ಎಳೆದು ತರಲಾಗಿದೆ ಎಂದರು.
ಕೆಲ ದಿನಗಳಿಂದ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದೆ ಎಂದು ಹೇಳುತ್ತಿದ್ದಾರೆ. ಅದರಲ್ಲಿ ನನ್ನ ಹೆಸರು ಬಳಸಿ, ನಾನು ಪಕ್ಷ ತೊರೆಯುತ್ತೇನೆ ಎಂದು ಹೇಳುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.