ಬಿಜೆಪಿ ಸೇರ್ತಾರ ಕಾಂಗ್ರೆಸ್ ಶಾಸಕ..?

Published : Sep 17, 2018, 02:18 PM ISTUpdated : Sep 19, 2018, 09:28 AM IST
ಬಿಜೆಪಿ ಸೇರ್ತಾರ ಕಾಂಗ್ರೆಸ್ ಶಾಸಕ..?

ಸಾರಾಂಶ

ಮೈತ್ರಿ ಸರ್ಕಾರದಲ್ಲಿ ಭುಗಿಲೆದ್ದಿರುವ ಅಸಮಾಧಾನಕ್ಕೆ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರು ಮುಲಾಮು ಹಚ್ಚುವ ಕೆಲಸ ಆರಂಭಿಸಿದ್ದಾರೆ. ಅದರಂತೆ ಇಂದು ಅತೃಪ್ತರು ಬಂದು ಭೇಟಿಯಾಗಿ ಎಂದು ಸಿದ್ದರಾಮಯ್ಯ ಅವರು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಇಂದು ಶಾಸಕ ಸುಧಾಕರ್ ಅವರು ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದರು. 

ಬೆಂಗಳೂರು, (ಸೆ.17): ಮೈತ್ರಿ ಸರ್ಕಾರದಲ್ಲಿ ಭುಗಿಲೆದ್ದಿರುವ ಅಸಮಾಧಾನಕ್ಕೆ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರು ಮುಲಾಮು ಹಚ್ಚುವ ಕೆಲಸ ಆರಂಭಿಸಿದ್ದಾರೆ. ಅದರಂತೆ ಇಂದು ಅತೃಪ್ತರು ಬಂದು ಭೇಟಿಯಾಗಿ ಎಂದು ಸಿದ್ದರಾಮಯ್ಯ ಅವರು ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಶಾಸಕ ಸುಧಾಕರ್ ಅವರು ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ​ ನಾನು ನಮ್ಮ ಜಿಲ್ಲೆಯ ಸಮಸ್ಯೆಗಳನ್ನು ಸಿದ್ದರಾಮಯ್ಯನವರ ಬಳಿ ಚರ್ಚೆ ಮಾಡಿದ್ದೇನೆ. ಸಮ್ಮಿಶ್ರ ಸರ್ಕಾರಕ್ಕೆ ಮುಜುಗರ ತರುವ ಹೇಳಿಕೆಗಳನ್ನು ನೀಡಬಾರದು ಎಂದು ಅವರೂ ಸಲಹೆ ನೀಡಿದ್ದಾರೆ. ಇವತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸಿದ್ದೇವೆ ಎಂದರು.

ಇನ್ನು ಆಪರೇಷನ್​ ಕಮಲದ ಬಗ್ಗೆ ಪ್ರತಿಕ್ರಿಯೆ ನೀಡಿದ ಸುಧಾಕರ್, ನಾನು ಪೇಷೆಂಟ್ ಅಲ್ಲಾ. ಸರ್ಜನ್ ಕೂಡ ಅಲ್ಲ. ಹಾಗಾಗಿ ಆಪರೇಷನ್ ಗೆ ಒಳಗಾಗುವ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದರು.

ಜಿಲ್ಲಾ ಮಟ್ಟದ ಸಮಸ್ಯೆಗಳ ಕುರಿತು ಸಿದ್ದರಾಮಯ್ಯ ಹಾಗೂ ಕೆ ಸಿ ವೇಣುಗೋಪಾಲ್ ಗಮನಕ್ಕೂ ಕೂಡ ತಂದಿದ್ದೇನೆ. ಅವರು ಸಮಸ್ಯೆ ಬಗೆಹರಿಸುವ ಭರವಸೆ ಕೊಟ್ಟಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲಿನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ