'ಕೈ' ಕೊಡ್ತಾರಾ ಶಾಸಕ : ಈ ಬಗ್ಗೆ ಹೇಳಿದ್ದೇನು?

Published : Apr 26, 2019, 11:43 AM IST
'ಕೈ' ಕೊಡ್ತಾರಾ ಶಾಸಕ : ಈ ಬಗ್ಗೆ ಹೇಳಿದ್ದೇನು?

ಸಾರಾಂಶ

ಲೋಕಸಭಾ ಚುನಾವಣೆ ಮುಕ್ತಾಯವಾಗಿದ್ದು, ಇದೇ ವೇಳೆ ರಾಜ್ಯ ರಾಜಕೀಯದಲ್ಲಿ ಹಲವು ಬೆಳವಣಿಗಗಳಾಗುತ್ತಿವೆ. ಹಲವರು ಕಾಂಗ್ರೆಸ್ ತೊರೆಯುವ ಚರ್ಚೆಗಳು ಆಗುತ್ತಿದ್ದು, ಈ ಬಗ್ಗೆ ಶಾಸಕರೋರ್ವರು ಹೇಳಿರುವುದೇನು?

ಬಳ್ಳಾರಿ: ಪಕ್ಷ ಬಿಡುವ ಬಗ್ಗೆ ನನ್ನ ಹೆಸರು ವಿನಾಕಾರಣ ಪ್ರಸ್ತಾಪವಾಗುತ್ತಿದೆ. ರಮೇಶ್ ಜಾರಕಿಹೊಳಿ ಸೇರಿದಂತೆ ಯಾರ ಜೊತೆಯೂ ನಾನು ಸಂಪರ್ಕದಲ್ಲಿಲ್ಲ. ನಾನು ಕಾಂಗ್ರೆಸ್ ಪಕ್ಷ ಬಿಟ್ಟು ಎಲ್ಲಿಗೂ ಹೋಗಲ್ಲ ಎಂದು ಹಗರಿಬೊಮ್ಮನಹಳ್ಳಿ ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ ಸ್ಪಷ್ಟಪಡಿಸಿದ್ದಾರೆ. 

ರಮೇಶ್ ಜಾರಕಿಹೊಳಿ ಅವರ ರಾಜಕೀಯ ಅವರಿಗೆ. ನನಗೇನು ಸಂಬಂಧವಿದೆ? ಪದೇ ಪದೇ ನನ್ನ ಹೆಸರು ಯಾರು ಹರಿಬಿಡುತ್ತಿದ್ದಾರೋ ಗೊತ್ತಿಲ್ಲ. ನಾನು ಬಿಜೆಪಿಗೆ ಹೋಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ನನಗೆ ಪಕ್ಷ ಇಷ್ಟೆಲ್ಲ ಸ್ಥಾನಮಾನ ನೀಡಿದ ಬಳಿಕವೂ ನಾನು ಹೇಗೆ ತಾನೆ ಬಿಜೆಪಿಗೆ ಹೋಗಲು ಸಾಧ್ಯ? ಎಂದು ಪ್ರಶ್ನಿಸಿದರು. 

ನನ್ನನ್ನು ತೇಜೋವಧೆ ಮಾಡಲು ವಿರೋಧಿಗಳು ಈ ತಂತ್ರ ಬಳಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ
ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ