ಯಡಿಯೂರಪ್ಪನಿಗೂ ವರುಣ ಕ್ಷೇತ್ರಕ್ಕೂ ಸಂಬಂಧವೇನು..?

Published : Apr 02, 2018, 11:39 AM ISTUpdated : Apr 14, 2018, 01:13 PM IST
ಯಡಿಯೂರಪ್ಪನಿಗೂ ವರುಣ ಕ್ಷೇತ್ರಕ್ಕೂ ಸಂಬಂಧವೇನು..?

ಸಾರಾಂಶ

'ವರುಣಾದಲ್ಲಿ ವಿಜಯೇಂದ್ರ ಏಕೆ, ಅವರಪ್ಪ ಬಂದು ನಿಲ್ಲಲಿ. ಗೆಲ್ಲೋದು ನಾನೇ...' ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರು: 'ವರುಣಾದಲ್ಲಿ ವಿಜಯೇಂದ್ರ ಏಕೆ, ಅವರಪ್ಪ ಬಂದು ನಿಲ್ಲಲಿ. ಗೆಲ್ಲೋದು ನಾನೇ...' ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

'ಯಡಿಯೂರಪ್ಪನಿಗೂ ವರುಣ ಕ್ಷೇತ್ರಕ್ಕೂ ಸಂಬಂಧವೇನು..?  ಅವರು ಬಂದು ನಿಂತ ತಕ್ಷಣ ಜನ ಓ ಅಂತ ಓಡಿ ಬರ್ತಾರಾ?  ನನ್ನ ಮಗ ನಿಂತ್ರೂ ಸಿಎಂ ಮಗ ಅಂತ ವೋಟು ಹಾಕೋದಿಲ್ಲ. ಸಿಎಂ ಆಗಿ ನಾನು ಏನು ಕೆಲಸ ಮಾಡಿದ್ದೀನಿ ಅನ್ನೋದು ಗೊತ್ತಿದೆ. ವರುಣಾ ಕ್ಷೇತ್ರದ ಜನರ ಕಷ್ಟಕ್ಕೆ ಸ್ಪಂದಿಸಿರುವುದು ನಾನು.  ಆ ಕ್ಷೇತ್ರದಲ್ಲಿ ಕೆಲಸ ಮಾಡಿರೋದು ನಾನು,' ಎಂದು ಸಿದ್ದರಾಮಯ್ಯ  ಹೇಳಿದ್ದಾರೆ.

'ಯಾರೋ ಬಂದು ನಿಂತ ತಕ್ಷಣ ಅಲ್ಲಿನ ಜನ ಬದಲಾಗೋದಿಲ್ಲ. ಜನರಿಗೆ ಯಾರಿಗೆ ವೋಟು ಹಾಕಬೇಕು ಅಂತ ಗೊತ್ತಿದೆ . ಮಾಜಿ ಸಿಎಂ ಮಕ್ಕಳು ನಿಂತು ಗೆಲ್ಲೋದಾಗಿದ್ದರೆ, ಯಾರೋ ಎಲ್ಲೆಲ್ಲೋ ಚುನಾವಣೆಗೆ ನಿಲ್ಲುತ್ತಿದ್ದರು,' ಎಂದಿದ್ದಾರೆ ಸಿಎಂ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೈ ಅಭ್ಯರ್ಥಿಗಳ ಸೋಲಿಗೆ ಆ ಪಕ್ಷದ ನಾಯಕರೇ ಮುಂದು: ಶಾಸಕ ಬಸನಗೌಡ ಪಾಟೀಲ ಯತ್ನಾಳ ಲೇವಡಿ
28ರ ಜಿಮ್ ಟ್ರೈನರ್‌ಗೆ 42ರ ಮಹಿಳೆ ಜೊತೆ ಸಂಬಂಧ? ಯುವಕನ ಸಾವಿನ ಹಿಂದೆ ಆಂಟಿ ಕರಿನೆರಳು