ಡಿಬ್ರೀಫಿಂಗ್ ಪೂರ್ಣ; ರಜೆ ಮೇಲೆ ತೆರಳಿದ ವಾಯುವೀರ ಅಭಿನಂದನ್

Published : Mar 15, 2019, 12:41 PM IST
ಡಿಬ್ರೀಫಿಂಗ್ ಪೂರ್ಣ; ರಜೆ ಮೇಲೆ ತೆರಳಿದ ವಾಯುವೀರ ಅಭಿನಂದನ್

ಸಾರಾಂಶ

ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದ ವೀರ ಯೋಧ ವಿಂಗ್ ಕಮಾಂಡರ್| ಪಾಕ್ ಸೇನೆಯ ಬಂಧನಕ್ಕೊಳಗಾಗಿ ಭಾರತಕ್ಕೆ ಮರಳಿದ್ದ ವಾಯುಸೇನೆಯ ವಿಂಗ್ ಕಮಾಂಡರ್| ಈಗ ಎಲ್ಲಿದ್ದಾರೆ?

ನವದೆಹಲಿ[ಮಾ.15]: ಪಾಕಿಸ್ತಾನದಿಂದ ಬಿಡುಗಡೆಯಾಗಿ ಬಂದಿರುವ ವಿಂಗ್‌ ಕಮಾಂಡರ್‌ ಅಭಿನಂದನ್‌ ವರ್ತಮಾನ್‌, ಪಾಕಿಸ್ತಾನಕ್ಕೆ ಸೇನಾ ಮಾಹಿತಿಯನ್ನು ಬಿಟ್ಟು ಕೊಟ್ಟಿದ್ದಾರೆಯೇ? ಪಾಕಿಸ್ತಾನ ಅಭಿನಂದನ್‌ ಅವರನ್ನು ಗೂಢಚಾರಿಕೆಗೆ ಬಳಿಸಿಕೊಳ್ಳುತ್ತಿದ್ದೆಯೇ? ಎಂಬ ಅನುಮಾನಗಳ ಪರಿಹಾರಕ್ಕೆ ಕಳೆದ ಕೆಲವು ದಿನಗಳಿಂದ ನಡೆಸುತ್ತಿರುವ ವಿಚಾರಣೆಯನ್ನು ಭಾರತೀಯ ವಾಯು ಪಡೆ ಹಾಗೂ ತನಿಖಾ ಸಂಸ್ಥೆಗಳು ಪೂರ್ಣಗೊಳಿಸಿವೆ. ಅದರ ಬೆನ್ನಲ್ಲೇ ಸೇನಾ ಆಸ್ಪತ್ರೆಯ ವೈದ್ಯರು ಸಲಹೆಯಂತೆ ಅಭಿನಂದನ್‌ ಕೆಲವು ವಾರಗಳ ಕಾಲ ಅನಾರೋಗ್ಯದ ರಜೆ ಪಡೆದುಕೊಂಡಿದ್ದಾರೆ.

ಶತ್ರುಪಡೆಯನ್ನು ಹಿಮ್ಮೆಟ್ಟಿಸುವ ವೇಳೆ ಫೆ.27ರಂದು ಮಿಗ್‌ ವಿಮಾನ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಪತನಗೊಂಡು ಅಭಬಿನಂದನ್‌ ಅವರನ್ನು ಪಾಕಿಸ್ತಾನ ಸೆರೆ ಹಿಡಿದಿತ್ತು. ಎರಡು ದಿನದ ಬಳಿಕ ಅಭಿನಂದನ್‌ ಅವರನ್ನು ಪಾಕಿಸ್ತಾನ ಬಿಡುಗಡೆ ಮಾಡಿತ್ತು.

ಬೆಂಗಳೂರಲ್ಲಿ ಪರೀಕ್ಷೆ: ರಜೆಯ ಬಳಿಕ ಅಭಿನಂದನ್‌ ಬೆಂಗಳೂರಿಗೆ ಆಗಮಿಸಿ ಇಲ್ಲಿನ ಸೇನಾ ಕೇಂದ್ರವೊಂದರಲ್ಲಿ ದೈಹಿಕ ಪರೀಕ್ಷೆ ಒಳಪಡಲಿದ್ದಾರೆ. ಆ ಪರೀಕ್ಷೆಯ ವರದಿಯ ಬಳಿಕ ಅವರು ಮತ್ತೆ ಯುದ್ಧ ವಿಮಾನ ಹಾರಿಸಬಹುದೇ? ಇಲ್ಲವೇ ಎಂಬುದು ನಿರ್ಧಾರವಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆಜಿಗೆ 3 ಲಕ್ಷ ಗಡಿಯತ್ತ ಬೆಳ್ಳಿ, ಮೂರೇ ದಿನದಲ್ಲಿ 34 ಸಾವಿರ ಏರಿಕೆ; ನಿಜವಾದ ಬೆಳ್ಳಿ ಗುರುತಿಸುವ ನಾಲ್ಕು ಮಾರ್ಗಗಳಿವು!
Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?