ಸುಖೋಯ್ ಯುದ್ಧ ವಿಮಾನ ಅಪಘಾತ

Published : Mar 15, 2017, 04:59 PM ISTUpdated : Apr 11, 2018, 01:10 PM IST
ಸುಖೋಯ್ ಯುದ್ಧ ವಿಮಾನ ಅಪಘಾತ

ಸಾರಾಂಶ

ಸಾಮಾನ್ಯ ಹಾರಾಟದ ವೇಳೆ ವಿಮಾನ ಇದ್ದಕ್ಕಿದ್ದಂತೆ ನೆಲಕ್ಕಪ್ಪಳಿಸಿದೆ. ಈ ವೇಳೆ ಇಬ್ಬರೂ ಪೈಲಟ್‌ಗಳು ಹೊರಜಿಗಿದು ಪಾರಾಗಿದ್ದಾರೆ.

ಜೈಪುರ(ಮಾ.15): ಭಾರತೀಯ ವಾಯುಪಡೆಗೆ ಸೇರಿದ ಸುಖೋಯ್ ಯುದ್ಧ ವಿಮಾನವೊಂದು ಬಾಡ್ಮೇರ್ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿದೆ.

ಘಟನೆಯಲ್ಲಿ ಇಬ್ಬರೂ ಪೈಲಟ್‌'ಗಳು ಪಾರಾಗಿದ್ದಾರೆ, ಆದರೆ ಮೂವರು ಗ್ರಾಮಸ್ಥರು ಗಾಯಗೊಂಡಿದ್ದಾರೆ. ಸಾಮಾನ್ಯ ಹಾರಾಟದ ವೇಳೆ ವಿಮಾನ ಇದ್ದಕ್ಕಿದ್ದಂತೆ ನೆಲಕ್ಕಪ್ಪಳಿಸಿದೆ. ಈ ವೇಳೆ ಇಬ್ಬರೂ ಪೈಲಟ್‌ಗಳು ಹೊರಜಿಗಿದು ಪಾರಾಗಿದ್ದಾರೆ. ಆದರೆ ವಿಮಾನ ಉರುಳಿಬಿದ್ದ ವೇಳೆ ಮೂವರು ಗ್ರಾಮಸ್ಥರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಜೊತೆಗೆ ಕೆಲ ಗುಡಿಸಲುಗಳಿಗೂ ಹಾನಿಯಾಗಿದೆ. ಘಟನೆ ಕುರಿತು ವಾಯುಪಡೆ ತನಿಖೆಗೆ ಆದೇಶಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Extreme fast-food consumer: ಸಿಕ್ಕಾಪಟ್ಟೆ ಫಾಸ್ಟ್‌ಫುಡ್‌ ತಿನ್ನುತ್ತಿದ್ದ 16ರ ಬಾಲಕಿ ಅನಾರೋಗ್ಯಕ್ಕೆ ಸಾವು
ಭಾರತದ ಪ್ರಜಾಪ್ರಭುತ್ವಕ್ಕೆ ಅಟಲ್ ಬಿಹಾರಿ ವಾಜಪೇಯಿ ಕೊಡುಗೆಗಳು: ಒಂದು ಸ್ಮರಣಾರ್ಥ ಲೇಖನ