ನಾಯಕತ್ವ ಬದಲಾವಣೆ ಸುದ್ದಿ, ರಾಜ್ಯ ಬಿಜೆಪಿ ಅಧ್ಯಕ್ಷ ಸೀಟಿಗೆ ಬಿತ್ತು ಟವೆಲ್..!

Published : May 06, 2019, 05:37 PM IST
ನಾಯಕತ್ವ ಬದಲಾವಣೆ ಸುದ್ದಿ, ರಾಜ್ಯ ಬಿಜೆಪಿ ಅಧ್ಯಕ್ಷ ಸೀಟಿಗೆ ಬಿತ್ತು ಟವೆಲ್..!

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗಾಗಿ ಪಕ್ಷದ ಹಲವು ಹಿರಿಯ ನಾಯಕರ ಕಣ್ಣು ಬಿದ್ದಿದ್ದು, ಪಟ್ಟಕ್ಕಾಗಿ ಸಾಕಷ್ಟು ಕಸರತ್ತು ಆರಂಭವಾಗಿದೆ. ಹಾಲಿ ಅಧ್ಯಕ್ಷರಾಗಿರುವ ಬಿ.ಎಸ್​.ಯಡಿಯೂರಪ್ಪ ಅವರ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅಧ್ಯಕ್ಷ ಗಾದಿಗೆ ಸದ್ದಿಲ್ಲದೇ ಹಲವರು ಪೈಪೋಟಿ ನಡೆಸಿದ್ದು, ರಾಜ್ಯಾಧ್ಯಕ್ಷ ಸೀಟಿಗೆ ಬಹಿರಂಗವಾಗಿ ಒಂದು ಟವೆಲ್ ಬಿದ್ದಿದೆ. 

ಕಲಬುರಗಿ, (ಮೇ.06): ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮತದಾನ ಮುಗಿದ ಬೆನ್ನಲ್ಲೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ.

ಈ ನಡುವೆ ಕರ್ನಾಟಕ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೇರಲು ರೆಡಿ ಎಂದು ಮಾಜಿ ಕೇಂದ್ರ ಸಚಿವ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೈ ಎತ್ತಿದ್ದಾರೆ.

ಸೋಮವಾರ ಕಲಬುರಗಿಯಲ್ಲಿ ಮಾತನಾಡಿದ ಅವರು, ಮುಂದಿನ ಅವಧಿಯ ಬಿಜೆಪಿ ರಾಜ್ಯಾಧ್ಯಕ್ಷರು ಉತ್ತರ ಕರ್ನಾಟಕದವರಾಗಬೇಕು ಎಂಬ ಬೇಡಿಕೆ ಇದೆ. ಹೀಗಾಗಿ ಉತ್ತರ ಕರ್ನಾಟಕಕ್ಕೆ ಬಿಜೆಪಿ ಅಧ್ಯಕ್ಷ ಸ್ಥಾನದ ಆದ್ಯತೆ ನೀಡುವ ವಿಶ್ವಾಸವಿದ್ದು, ನಾನು ಕೂಡ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಹೇಳಿದರು.

ಸಧ್ಯ ಬಿಜೆಪಿ ಹೈಕಮಾಂಡ್ ಲೋಕಸಭೆ ಚುನಾವಣೆಯಲ್ಲಿ ಮಗ್ನವಾಗಿದ್ದು,  ಫಲಿತಾಂಶ ಹೊರ ಬಂದ ಬಳಿಕ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುವ ಸಾಧ್ಯತೆಗಳಿವೆ.

ಲೋಕಸಭಾ ಫಲಿತಾಂಶದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾಗುತ್ತಾರೆ ಎನ್ನುವ ಮಾತುಗಳು ಪಕ್ಷದ  ವಲಯದಲ್ಲಿ ಹರಿದಾಡುತ್ತಿದೆ. ಇದ್ರಿಂದ ಅಧ್ಯಕ್ಷ ಸ್ಥಾನಕ್ಕಾಗಿ ಆಕಾಂಕ್ಷಿಗಳು ಸಹ ಒಳಗೊಳಗೆ ಸದ್ದಿಲ್ಲದೇ ಲಾಬಿ ನಡೆಸಿದ್ದಾರೆ. 

ಆದ್ರೆ ಯಾರೂ ಸಹ ಬಹಿರಂಗವಾಗಿ ಹೇಳಿಕೆ ನೀಡಲು ತಯಾರಿಲ್ಲ. ಆದ್ರೆ, ಇದೀಗ ಬಸವರಾಜ್ ಪಾಟೀಲ್ ಯತ್ನಾಳ್ ನಾನು ಆಕಾಂಕ್ಷಿ ಎಂದು ಹೇಳಿರುವುದು ಭಾರೀ ಕುತೂಹಲ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗರ್ಭಧರಿಸಿ 9 ತಿಂಗಳು ಪೂರೈಸಿದ ಹಸುವಿಗೆ ಸೀಮಂತ ಮಾಡಿದ ಮಂಡ್ಯ ರೈತ
ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌