
ಕೆಲದಿನಗಳ ಹಿಂದೆ ಯೋಧ ಪರಮ್ಜಿತ್ ಸಿಂಗ್ ಪಾಕಿಸ್ತಾನ ಸೇನೆಯ ಗುಂಡಿನ ದಾಳಿಯಲ್ಲಿ ಹುತಾತ್ಮರಾಗಿದ್ದರು. ಈಗ ಅವರ 12 ವರ್ಷದ ಶಿಕ್ಷಣದ ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳುವುದಾಗಿ ಹಿಮಾಚಲಪ್ರದೇಶದ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಾಗಿರುವ ದಂಪತಿ ಘೋಷಿಸಿದ್ದಾರೆ.
ಐಎಎಸ್ ಅಧಿಕಾರಿ ಯೂನಸ್ ಖಾನ್ ಮತ್ತು ಅವರ ಪತ್ನಿ, ಐಪಿಎಸ್ ಅಧಿಕಾರಿ ಅಂಜುಮ್ ಅರಾ ಅವರೇ ಈ ಘೋಷಣೆ ಮಾಡಿದ ದಂಪತಿ. ಹುತಾತ್ಮ ಯೋಧನ ಮಗಳು ಶಿಕ್ಷಣ ಪೂರೈಸಿ ಸ್ವಂತ ದುಡಿಮೆ ಮಾಡಿ ಜೀವನ ಸಾಗಿಸಲು ಸಮರ್ಥಳಾಗುವವರೆಗೆ ಆಕೆಯ ಎಲ್ಲ ಜವಾಬ್ದಾರಿಯನ್ನು ತಾವೂ ವಹಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಹುತಾತ್ಮ ಯೋಧ ಪರಮ್ಜಿತ್ ಸಿಂಗ್ ಪತ್ನಿ ಬಳಿಯೂ ಮಾತನಾಡಿರುವುದಾಗಿ ದಂಪತಿ ತಿಳಿಸಿದ್ದಾರೆ. ಸದ್ಯ ಮಗಳು ಕುಶ್ದೀಪ್ ಕೌರ್ ಏಳನೇ ತರಗತಿಯಲ್ಲಿ ಓದುತ್ತಿದ್ದಾಳೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.