
ಲಖನೌ(ಮೇ.29): ಕರ್ನಾಟಕ ಕೇಡರ್ ಅಧಿಕಾರಿ ಅನುರಾಗ್ ತಿವಾರಿ ಅನುಮಾಸ್ಪದಕ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರ ಮೂವರು ಪೊಲೀಸರನ್ನು ಅಮಾನತುಗೊಳಿಸಿದೆ.
ಈ ಮೂವರು ಪೊಲೀಸರು ಅರಕ್ಷಕ ನಿರ್ವಹಣಾ ವಾಹನದಲ್ಲಿ(ಪಿಆರ್'ವಿ) ಕೆಲಸ ನಿರ್ವಹಿಸುತ್ತಿದ್ದು, ತಿವಾರಿ ಮೃತಪಟ್ಟ ಸಂದರ್ಭದಲ್ಲಿ ಶವದ ಬಳಿ ಹೋಗಲು ತಡ ಮಾಡಿದ ಹಿನ್ನಲೆಯಲ್ಲಿ ಆಂತರಿಕ ವಿಚಾರಣೆಗೊಳಿಸಿದ ನಂತರ ಅಮಾನತುಗೊಳಿಸಲಾಗಿದೆ ಎಂದು ಲಖನೌ'ನ ಹಿರಿಯ ಎಸ್ಪಿ ದೀಪಕ್ ಕುಮಾರ್ ತಿಳಿಸಿದ್ದಾರೆ. ತಿವಾರ ಅವರ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿರುವ ಹಿನ್ನಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಪ್ರಕರಣವನ್ನು ಸಿಬಿಐ'ಗೆ ವಹಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.