ಐಎಎಸ್ ಅಧಿಕಾರಿಯ ಬಂಧನ :ಅಧಿಕಾರದಲ್ಲಿದ್ದಾಗಲೆ ಬಂಧನವಾದ ಮೊದಲಿಗರು

Published : May 15, 2017, 12:09 PM ISTUpdated : Apr 11, 2018, 01:02 PM IST
ಐಎಎಸ್ ಅಧಿಕಾರಿಯ ಬಂಧನ :ಅಧಿಕಾರದಲ್ಲಿದ್ದಾಗಲೆ ಬಂಧನವಾದ ಮೊದಲಿಗರು

ಸಾರಾಂಶ

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ'ಕೋರ್ಟ್ ಮರು ತನಿಖೆಯ ಆದೇಶದ ಹಿನ್ನಲೆಯಲ್ಲಿ ತನಿಖೆ ಆರಂಭಿಸಿದ್ದ ಲೋಕಾಯುಕ್ತ ಎಸ್'ಐಟಿ ಅಧಿಕಾರಿಗಳು ಗಂಗಾರಾಮ್ ಬಡೇರಿಯಾ ಅವರನ್ನು ಬಂಧಿಸಲಾಗಿದೆ.

ಬೆಂಗಳೂರು(ಮೇ.15): ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿಯಾದ ರಾಜ್ಯ ಕಂದಾಯ ವಿಭಾಗದ ಕಾರ್ಯದರ್ಶಿಯಾಗಿರುವ ಗಂಗಾರಾಮ್ ಬಡೇರಿಯಾ ಅವರನ್ನು ಲೋಕಾಯುಕ್ತ ಎಸ್'ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ'ಕೋರ್ಟ್ ಮರು ತನಿಖೆಯ ಆದೇಶದ ಹಿನ್ನಲೆಯಲ್ಲಿ ತನಿಖೆ ಆರಂಭಿಸಿದ್ದ ಲೋಕಾಯುಕ್ತ ಎಸ್'ಐಟಿ ಅಧಿಕಾರಿಗಳು ಗಂಗಾರಾಮ್ ಬಡೇರಿಯಾ ಅವರನ್ನು ಬಂಧಿಸಲಾಗಿದೆ. ಸೇವೆಯಲ್ಲಿದ್ದಾಗಲೆ ಬಂಧನಕ್ಕೆ ಒಳಗಾದ ಮೊದಲ ಐಎಎಸ್ ಅಧಿಕಾರಿ ಇವರಾಗಿದ್ದಾರೆ. ಇವರು ಬಳ್ಳಾರಿ ಜಿಲ್ಲೆಯಲ್ಲಿ ಅರಣ್ಯಾಧಿಕಾರಿಯಾಗಿದ್ದಾಗ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿರುವ ಆರೋಪದ ಹಿನ್ನಲೆಯಲ್ಲಿ ಬಂಧಿಸಲಾಗಿದೆ.

ಹೆಚ್.ಡಿ. ಕುಮಾರ'ಸ್ವಾಮಿ ಹಾಗೂ ಧರ್ಮ ಸಿಂಗ್ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಳ್ಳಾರಿಯ ಜಂತಕಲ್ ಮೈನಿಂಗ್ ಅಕ್ರಮ ಗಣಿಕಾರಿಕೆಗೆ ಸಹಕಾರ ನೀಡಿರುವ ಆರೋಪ ಇವರ ಮೇಲಿದೆ.

ಈ ಪ್ರಕರಣವನ್ನು ಕೈಬಿಡಬೇಕೆಂದು ಮಾಜಿ ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್'ಗೆ ಮನವಿ ಸಲ್ಲಿಸಿದ್ದರು. ಆದರೆ ಕೋರ್ಟ್' ಮನವಿಯನ್ನು ಪುರಸ್ಕರಿಸಿರಲಿಲ್ಲ. ಚೀನಾಗೆ ಹೋಗುತ್ತಿದ್ದ ಗಣಿಯನ್ನು ತಡಿಯದೆ ಅಕ್ರಮ ಗಣಿಗಾರಿಕೆಗೆ ಬೆಂಬಲ ನೀಡಿದ್ದಾರೆ ಎನ್ನುವುದು ಪ್ರಮುಖ ಆರೋಪವಾಗಿದೆ. ಗಂಗಾರಾಮ್ ಬಡೇರಿಯಾ ಬಂಧನ ಭ್ರಷ್ಟ ಅಧಿಕಾರಿಗಳಿಗೆ ಎಚ್ಚರಿಕೆಯ ಕರೆಗಂಟೆ ಎಂದೆ ಹೇಳಬಹುದು. ಈ ಪ್ರಕರಣವೂ ಮಾಜಿ ಸಿಎಂ'ಗಳಾದ ಕುಮಾರಸ್ವಾಮಿ ಹಾಗೂ ಧರ್ಮ'ಸಿಂಗ್ ಅವರಿಗೆ ತೊಂದರೆಯಾಗುವ ಸಾಧ್ಯತೆಯಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಳ್ಳಾರಿಯಲ್ಲಿ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆ: ಕಾಲು ಗೆಜ್ಜೆ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು
ಜವರಾಯನಂತೆ ಬಂತು ಜಲ್ಲಿಕಲ್ಲು ತುಂಬಿದ್ದ ಲಾರಿ: ಮನೆ ಮುಂದೆ ಚಳಿ ಕಾಯಿಸುತ್ತಿದ್ದ 90 ವರ್ಷದ ವೃದ್ಧ ಬಲಿ