
ಲಕ್ನೋ(ಜೂ.05): ಗಂಗಾ ನದಿ ಶುದ್ಧೀಕರಣಕ್ಕಾಗಿ ಜಾಗೃತಿ ಮೂಡಿಸಲು ಐಎಎಸ್ ಅಧಿಕಾರಿಯೋರ್ವರು, ಗಂಗಾಜಲ ಹೊತ್ತು ಮೌಂಟ್ ಎವರೆಸ್ಟ್ ಪರ್ವತ ಯಶಸ್ವಿಯಾಗಿ ಏರಿದ್ದಾರೆ.
ಉತ್ತರ ಪ್ರದೇಶ ಕೆಡರ್ ಐಎಎಸ್ ಅಧಿಕಾರಿ ರವೀಂದ್ರ ಕುಮಾರ್ ಯಶಸ್ವಿಯಾಗಿ ಎವರೆಸ್ಟ್ ಶಿಖರದ ತುದಿ ತಲುಪಿದ್ದು, ಈ ಮೂಲಕ ಎವರೆಸ್ಟ್ ಏರಿದ ಮೊದಲ ಐಎಎಸ್ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಕೇಂದ್ರ ಸರ್ಕಾರದ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ರವೀಂದ್ರ ಕುಮಾರ್, ಗಂಗಾ ನದಿ ಶುದ್ಧೀಕರಣಕ್ಕಾಗಿ ಜನಜಾಗೃತಿ ಮೂಡಿಸುವಲ್ಲಿ ನಿರತರಾಗಿದ್ದಾರೆ.
‘ಸ್ವಚ್ಛ ಗಂಗಾ, ಸ್ವಚ್ಛ ಭಾರತ ಎವರೆಸ್ಟ್ ಅಭಿಯಾನ 2019’ ಎಂಬ ಹೆಸರಿನಲ್ಲಿ ರವೀಂದ್ರ ಕುಮಾರ್ ಯಶಸ್ವಿಯಾಗಿ ಎವರೆಸ್ಟ್ ಗಿರಿ ಶಿಖರ ಏರಿದ್ದು, ರವೀಂದ್ರ ಕುಮಾರ್ ಅವರ ಅಭಿಯಾನಕ್ಕೆ ಎಲ್ಲೆಡೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.