ರಾಜ್ಯ ಸರ್ಕಾರದ ವಿರುದ್ಧ  ರೋಹಿಣಿ ಮತ್ತೆ ಕಾನೂನು ಸಮರ?

Published : Feb 22, 2019, 05:52 PM IST
ರಾಜ್ಯ ಸರ್ಕಾರದ ವಿರುದ್ಧ  ರೋಹಿಣಿ ಮತ್ತೆ ಕಾನೂನು ಸಮರ?

ಸಾರಾಂಶ

ಕಳೆದ ಮೂರು ದಿನಗಳಲ್ಲಿ ರಾಜ್ಯ ಸರಕಾರ ವರ್ಗಾವಣೆ ಪರ್ವ ನಡೆಸಿದೆ. ಇದೀಗ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿರುವುದು ಸಹಜವಾಗಿಯೇ ಅನೇಕ ಪ್ರಶ್ನೆ ಎತ್ತಿದೆ.

ಬೆಂಗಳೂರು[ಫೆ.22] ರೋಹಿಣಿ ಸಿಂಧೂರಿ ಅವರನ್ನು ಹಾಸನ ಜಿಲ್ಲಾಧಿಕಾರಿ ಸ್ಥಾನದಿಂದ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದರೂ ರೋಹಿಣಿ ಕಾನೂನು ಹೋರಾಟ ಆರಂಭ ಮಾಡುತ್ತಾರೋ ಎಂಬ ಮಾತು ಕೇಳಿ ಬಂದಿದೆ.

ಈ ಹಿಂದೆ ಸಹ ಸರ್ಕಾರದ ವರ್ಗಾವಣೆ ವಿರುದ್ಧ ರೋಹಿಣಿ ನ್ಯಾಯಾಲಯದ ಮೆಟ್ಟಿಲು ಏರಿ ಜಯ ಕಂಡಿದ್ದರು.  2017 ಜುಲೈ 14 ರಿಂದ ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಕಾರ್ಯನಿರ್ವಹಿಸುತ್ತಾ ಬಂದಿದ್ದಾರೆ.

ಖಡಕ್ ಡಿಸಿ, ಜನ ಮೆಚ್ಚಿದ ದಕ್ಷ ಅಧಿಕಾರಿ ರೋಹಿಣಿ ಸಿಂಧೂರಿ

ಅವಧಿ ಪೂರ್ಣವಾಗುವ ಮುನ್ನ ವರ್ಗಾವಣೆ ಮಾಡಿದ್ದಕ್ಕೆ ಕಾನೂನು ಹೋರಾಟ ಮಾಡಿ ರೋಹಿಣಿ ಗೆದ್ದಿದ್ದರು. 2018 ರ ‌ ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿ ಅಂದರೆ ಕಳೆದ ವರ್ಷ ಫೆಬ್ರವರಿ 22 ರಂದು  ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ  ಸರ್ಕಾರದ  ವರ್ಗಾವಣೆ ಆದೇಶವನ್ನು ಚುನಾವಣಾ ಆಯೋಗ ರದ್ದು ಮಾಡಿತ್ತು.

ಸಚಿವ ರೇವಣ್ಣ ಬೆಂಬಲಿಗನಿಗೆ ಡಿಸಿ ರೋಹಿಣಿ ಕೊಟ್ಟ ‘ಮರಳೇಟು’

ಮತ್ತೆ ಮಾರ್ಚ್ 5 ರಂದು ಹಳೆ ಆದೇಶ ರದ್ದು ಮಾಡಿ ಮತ್ತೆ ಮಾರ್ಚ್ 7ರಂದು ಮತ್ತೊಮ್ಮೆ ವರ್ಗಾವಣೆ ಆದೇಶ ನೀಡಲಾಗಿತ್ತು. ಸರ್ಕಾರದ ವರ್ಗಾವಣೆ ಪ್ರಶ್ನಿಸಿ  ಕಾನೂನು ಹೋರಾಟಕ್ಕಿಳಿದಿದ್ದ ರೋಹಿಣಿ ಜೂನ್ 25 ರಂದು ಹಾಸನ ಡಿಸಿಯಾಗಿ ಮತ್ತೆ ಬಂದಿದ್ದರು.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!