ಬನಶಂಕರಿ ದೇವಸ್ಥಾನದ ಪಕ್ಕ ಇಂದಿರಾ ಕ್ಯಾಂಟೀನ್ ನಿರ್ಮಾಣ; ಆಕ್ರೋಶಕ್ಕೆ ಕಾರಣ

Published : Aug 02, 2017, 03:57 PM ISTUpdated : Apr 11, 2018, 12:44 PM IST
ಬನಶಂಕರಿ ದೇವಸ್ಥಾನದ ಪಕ್ಕ ಇಂದಿರಾ ಕ್ಯಾಂಟೀನ್ ನಿರ್ಮಾಣ; ಆಕ್ರೋಶಕ್ಕೆ ಕಾರಣ

ಸಾರಾಂಶ

ನಗರದ ಐತಿಹಾಸಿಕ ಬನಶಂಕರಿ ದೇವಸ್ಥಾನದ ಪಕ್ಕದಲ್ಲೇ ಬಿಬಿಎಂಪಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡುತ್ತಿದ್ದು ಇದಕ್ಕೆ ಸ್ಥಳೀಯ ನಿವಾಸಿಗಳಿಂದ ವಿರೋಧ ವ್ಯಕ್ತವಾಗಿದೆ.

ಬೆಂಗಳೂರು (ಆ.02): ನಗರದ ಐತಿಹಾಸಿಕ ಬನಶಂಕರಿ ದೇವಸ್ಥಾನದ ಪಕ್ಕದಲ್ಲೇ ಬಿಬಿಎಂಪಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡುತ್ತಿದ್ದು ಇದಕ್ಕೆ ಸ್ಥಳೀಯ ನಿವಾಸಿಗಳಿಂದ ವಿರೋಧ ವ್ಯಕ್ತವಾಗಿದೆ.

ಬಿಬಿಎಂಪಿ ದೇವಸ್ಥಾನದ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ಮಾಡಲು ಹೊರಟಿದೆ. ಇಲ್ಲಿ ಕ್ಯಾಂಟೀನ್ ನಿರ್ಮಾಣ ಮಾಡಲು ಸಾಕಷ್ಟು ತೊಡಕುಗಳಿವೆ. ಅಧಿಕಾರಿಗಳು ಆತುರಾತುರವಾಗಿ ಜಾಗವನ್ನು ಆಯ್ಕೆ ಮಾಡಿದ್ದಾರೆ. ಆ.15 ರವರೆಗೆ ಗಡುವಿದೆ. ಸರ್ಕಾರ ದೇವಸ್ಥಾನಕ್ಕೆಂದು ನೀಡಿದ ಭೂಮಿಯಲ್ಲಿ ಕ್ಯಾಂಟೀನ್ ಮಾಡಲು ಹೇಗೆ ಸಾದ್ಯ ಎಂದು ಅಲ್ಲಿನ ಕಾರ್ಯಕರ್ತ ಪ್ರಕಾಶ್ ಎಸ್ ಪ್ರಶ್ನಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡುತ್ತಿರುವ ಜಾಗ ಬಿಬಿಎಂಪಿಗೆ ಸೇರಲಿದೆ ಎಂದು ಇಂದಿರಾ ಕ್ಯಾಂಟೀನ್ ಯೋಜನೆಯ ಉಸ್ತುವಾರಿ ನೋಡಿಕೊಳ್ಲುತ್ತಿರುವ ಬಿಬಿಎಂಪಿ ವಿಶೇಷ ಅಧಿಕಾರಿ ಮನೋಜ್ ರಾಜನ್ ಹೇಳಿದ್ದಾರೆ.

ಅಲ್ಲಿನ ಸ್ಥಳೀಯ ನಿವಾಸಿಗಳೊಂದಿಗೆ ಚರ್ಚಿಸದೇ ಬಿಬಿಎಂಪಿ ಜಾಗವನ್ನು ಆಯ್ಕೆ ಮಾಡಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ನಿರ್ಮಾಣ ನೆಪದಲ್ಲಿ ನಗರದ ವಾರ್ಡ್’ಗಳಾದ ಕೋಣನಕುಂಟೆ, ಕತ್ರಿಗುಪ್ಪೆ, ಕೆಂಪೇಗೌಡ ನಗರ, ಅತ್ತೂರು, ದೇವರಾಜೀವನಹಳ್ಳಿ, ಬೆನ್ನಿಗನಹಳ್ಳಿ, ಸಿ.ವಿ ರಾಮನ್ ನಗರ, ಚಿನ್ನಪ್ಪ ಗಾರ್ಡನ್’ಗಳಲ್ಲಿ  ಬಿಬಿಎಂಪಿ ಮರಗಳನ್ನು ಕಡಿಯುತ್ತಿರುವುದು ಸಾರ್ವಜನಿಕ ಆಕ್ರೋಶ ಕ್ಕೆ ಕಾರಣವಾಗಿದೆ.

  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!