
ಬೆಂಗಳೂರು : ಬಿಜೆಪಿಯವರು ಒಪ್ಪಿಕೊಂಡರೆ ರಾಜ್ಯದಲ್ಲಿ ಪಿಎಫ್ಐ, ಎಸ್ಡಿಪಿಐ ಹಾಗೂ ಸಂಘ ಪರಿವಾರದ ಸಂಘಟನೆಗಳನ್ನು ನಿಷೇಧಿಸಲು ಶಿಫಾರಸು ಮಾಡಲು ನಾನು ಸಿದ್ಧ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ರಾಜ್ಯದಲ್ಲಿ ಕೇವಲ ಸಂಘ ಪರಿವಾರದವರು ಅಥವಾ ಹಿಂದುಗಳ ಕೊಲೆ ಮಾತ್ರ ಆಗಿಲ್ಲ, ಮುಸ್ಲಿಮರ ಕೊಲೆಯೂ ಆಗಿದೆ. ಎರಡೂ ಕೈ ತಟ್ಟಿದರೆ ಮಾತ್ರ ಚಪ್ಪಾಳೆ ಆಗುತ್ತದೆ. ಕ್ರಿಯೆಗೆ ಪ್ರತಿಕ್ರಿಯೆ ಇದ್ದೇ ಇರುತ್ತದೆ.
ಪಿಎಫ್ಐ ಮತ್ತಿತರ ಸಂಘಟನೆಗಳು ಕೊಲೆ ಮಾಡಿವೆ ಎಂದು ಹೇಳುವ ನೀವು (ಬಿಜೆಪಿ) ಮುಸ್ಲಿಮರನ್ನು ಕೊಲೆ ಮಾಡಿರುವ ಸಂಘಟನೆಗಳ ಬಗ್ಗೆಯೂ ಹೇಳಬೇಕು. ಕಾಂಗ್ರೆಸ್ ಯಾರ ಪರವಾಗಿಯೂ ಇಲ್ಲ, ಯಾರೇ ತಪ್ಪು ಮಾಡಿದರೂ ಅದು ತಪ್ಪು, ಯಾರನ್ನೂ ಸಮರ್ಥಿಸಿಕೊಳ್ಳುವುದಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.