ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರದ್ದಾಗಲಿದೆ ಮೋದಿ ಸರ್ಕಾರದ ಯೋಜನೆ

Published : Jul 13, 2018, 10:34 AM IST
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರದ್ದಾಗಲಿದೆ ಮೋದಿ ಸರ್ಕಾರದ ಯೋಜನೆ

ಸಾರಾಂಶ

ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯೊಂದನ್ನು ರದ್ದು ಮಾಡುವುದಾಗಿ ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ. 

ಮುಂಬೈ: ಬಹುನಿರೀಕ್ಷಿತ ಅಹಮದಾಬಾದ್‌-ಮುಂಬೈ ಬುಲೆಟ್‌ ರೈಲು ಆರ್ಥಿಕವಾಗಿ ಕಾರ್ಯಸಾಧುವಲ್ಲ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಯೋಜನೆಯನ್ನು ರದ್ದುಪಡಿಸುವುದಾಗಿ ಮಹಾರಾಷ್ಟ್ರದ ಮಾಜಿ ಸಿಎಂ ಪೃಥ್ವಿರಾಜ್‌ ಚೌಹಾಣ್‌ ಹೇಳಿದ್ದಾರೆ.

ಬುಲೆಟ್‌ ರೈಲು ಯೋಜನೆಗೆ 250 ಕೋಟಿ ರು. ಹೆಚ್ಚುವರಿ ರಾಜ್ಯದ ಪಾಲು ನೀಡುವುದಕ್ಕೆ ವಿಧಾನಸಭಾ ಅಧಿವೇಶನದಲ್ಲಿ ಕಾಂಗ್ರೆಸ್‌ ವಿರೋಧ ವ್ಯಕ್ತಪಡಿಸಿತ್ತು. ಆದರೆ, ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಪ್ರಸ್ತಾಪ ಮಂಜೂರಾಗಿದೆ.

ಜಪಾನ್‌ ಪ್ರಧಾನಿ ಶಿಂಜೊ ಅಬೆ ಮತ್ತು ಪ್ರಧಾನಿ ಮೋದಿಯವರ ರಾಜಕೀಯ ಲಾಭಕ್ಕಾಗಿ ಈ ಒಪ್ಪಂದ ಮಾಡಲಾಗಿದೆ. ಒಪ್ಪಂದಕ್ಕಾಗಿ ಅಬೆ ಭಾರತ ಪ್ರವಾಸ ಕೈಗೊಂಡಿದ್ದುದು ನಿಗದಿತವಾಗಿರಲಿಲ್ಲ. ಒಪ್ಪಂದಕ್ಕೆ ಸಹಿ ಹಾಕುವಾಗ ಅಬೆ ಜಪಾನ್‌ನಲ್ಲಿ ಮತ್ತು ಮೋದಿ ಗುಜರಾತ್‌ನಲ್ಲಿ ಚುನಾವಣೆ ಎದುರಿಸುತ್ತಿದ್ದರು ಎಂದು ಚವಾಣ್‌ ಆಪಾದಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಾವಣಗೆರೆಯಲ್ಲಿ ಬಹುಕೋಟಿ ಉದ್ಯೋಗ ವಂಚನೆ: ಹಿರೇಉಡ ತಾಂಡಾ ವಂಚಕರ ವಿರುದ್ಧ ಕ್ರಮಕ್ಕೆ 15 ದಿನಗಳ ಗಡುವು!
8 ವರ್ಷಗಳ ಬಳಿಕ ಕೃಷಿ ಇಲಾಖೆಯಲ್ಲಿ ನೇಮಕಾತಿ : 945 ಹುದ್ದೆಗಳ ಭರ್ತಿಗೆ ಮೂರು ತಿಂಗಳೊಳಗೆ ಮುಹೂರ್ತ: ಚಲುವರಾಯ