ಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ ಭಯೋತ್ಪಾದಕರಿಗೆ 1 ಕೋಟಿ ಪರಿಹಾರ!

Published : Dec 27, 2018, 12:25 PM IST
ಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ  ಭಯೋತ್ಪಾದಕರಿಗೆ 1 ಕೋಟಿ ಪರಿಹಾರ!

ಸಾರಾಂಶ

ಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ ಜೈಲಿಂದ ಉಗ್ರರ ಬಿಡುಗಡೆ !  ಉಗ್ರರಿಗೆ .1 ಕೋಟಿ, ಉದ್ಯೋಗ: ಕಾಂಗ್ರೆಸ್ಸಿಗನ ಆಫರ್‌ | ಅಮಾಯಕರನ್ನು ಕೊಂದ ಬಿಜೆಪಿಗರಿಗೆ ನೇಣು: ಭರವಸೆ

ಜಮ್ಮು (ಡಿ. 27): ಮತ ಗಳಿಕೆಗಾಗಿ ರಾಜಕಾರಣಿಗಳು ಯಾವ ಹಂತಕ್ಕೆ ಬೇಕಾದರೂ ಇಳಿಯುತ್ತಾರೆ ಎಂಬ ಜನರ ಮಾತನ್ನು ನಿಜವಾಗಿಸುವಂತೆ ಜಮ್ಮು-ಕಾಶ್ಮೀರದ ಹಿರಿಯ ಕಾಂಗ್ರೆಸ್ಸಿಗರೊಬ್ಬರು ನಡೆದುಕೊಂಡಿದ್ದಾರೆ. ಕಣಿವೆ ರಾಜ್ಯದಲ್ಲಿ ಕಾಂಗ್ರೆಸ್‌ ಏನಾದರೂ ಅಧಿಕಾರಕ್ಕೆ ಬಂದರೆ, ಜೈಲಿನಲ್ಲಿರುವ ಭಯೋತ್ಪಾದಕರನ್ನು ಬಿಡುಗಡೆ ಮಾಡುವುದರ ಜತೆಗೆ ‘ಅಮಾಯಕ’ ಶಂಕಿತ ಭಯೋತ್ಪಾದಕರಿಗೆ 1 ಕೋಟಿ ರು. ಪರಿಹಾರ ನೀಡುವುದಾಗಿ ಪ್ರಕಟಿಸಿದ್ದಾರೆ.

ಅಲ್ಲದೆ ಕಾಶ್ಮೀರದಲ್ಲಿ ಅಮಾಯಕರನ್ನು ಗುರಿಯಾಗಿಸಿಕೊಂಡಿರುವ ಬಿಜೆಪಿ ನಾಯಕರನ್ನು ನೇಣಿಗೇರಿಸುವ ಭರವಸೆಯನ್ನೂ ಅವರು ಕೊಟ್ಟಿದ್ದಾರೆ. ಇಂತಹ ಕೀಳು ಮಟ್ಟಕ್ಕೆ ಇಳಿದಿರುವ ರಾಜಕಾರಣಿ ಎಐಸಿಸಿ ಅಲ್ಪಸಂಖ್ಯಾತ ವಿಭಾಗದ ವೀಕ್ಷಕ ಹಾಜಿ ಸಗೀರ್‌ ಸಯೀದ್‌ ಖಾನ್‌.

ಕಾಶ್ಮೀರ ಒಂದು ಕಾಲದಲ್ಲಿ ಸ್ವರ್ಗವಾಗಿತ್ತು. ಈಗ ಹೆಣಗಳಿಂದ ತುಂಬಿಹೋಗಿದೆ. ಬಿಜೆಪಿ ನಡೆಸುತ್ತಿರುವ ದೌರ್ಜನ್ಯಗಳಿಂದಾಗಿ ಹಲವಾರು ಅಮಾಯಕರು ಸಾವನ್ನಪ್ಪುತ್ತಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಭಯೋತ್ಪಾದನೆ ಹೆಸರಿನಲ್ಲಿ ದೌರ್ಜನ್ಯದಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ 1 ಕೋಟಿ ರು. ಪರಿಹಾರ ನೀಡುವುದರ ಜತೆಗೆ, ಭಯೋತ್ಪಾದನೆ ಆರೋಪದಡಿ ಜೈಲಿನಲ್ಲಿರುವವರ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!